ಕೇಂದ್ರ ಸಚಿವ ವಿ.ಸೋಮಣ್ಣ 
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆ: ಕಾಲುವೆ ಕಾಮಗಾರಿಗೆ 51.32 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಗೆ ಕೇಂದ್ರದ ಅನುಮೋದನೆ!

ಕೇಂದ್ರ ಅರಣ್ಯ ಸಚಿವರ ಅಧ್ಯಕ್ಷತೆಯ ಸ್ಥಾಯಿ ಸಮಿತಿ, ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಡಿಸೆಂಬರ್ 21, 2024 ರಂದು ನಡೆಸಿದ ಸಭೆಯಲ್ಲಿ ಈ ಬಗ್ಗೆ ಶಿಪಾರಸ್ಸು ಮಾಡಿತ್ತು.

ತುಮಕೂರು: ಭದ್ರಾ ಮೇಲ್ಡಂಡೆ ಯೋಜನೆಯ ತುಮಕೂರು ಜಿಲ್ಲೆಯ ಭಾಗದಲ್ಲಿನ ಕಾಲುವೆ ನಿರ್ಮಾಣ ಕಾಮಗಾರಿಗೆ ಬುಕ್ಕಾಪಟ್ಟಣದಿಂದ ಚಿಂಕಾರದವರೆಗಿನ ವನ್ಯ ಜೀವಿ ಸಂರಕ್ಷಣಾ ಕ್ಷೇತ್ರದ 51.32 ಹೆಕ್ಟೇರ್ ಪ್ರದೇಶವನ್ನು ಬಳಸಿಕೊಳ್ಳಲು ಕೇಂದ್ರ ಅರಣ್ಯ ಇಲಾಖೆ ಅನುಮೋದನೆಯನ್ನು ನೀಡಿ ಇಂದು ಆದೇಶ ಹೊರಡಿಸಿದೆ.

ಕೇಂದ್ರ ಅರಣ್ಯ ಸಚಿವರ ಅಧ್ಯಕ್ಷತೆಯ ಸ್ಥಾಯಿ ಸಮಿತಿ, ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಡಿಸೆಂಬರ್ 21, 2024 ರಂದು ನಡೆಸಿದ ಸಭೆಯಲ್ಲಿ ಈ ಬಗ್ಗೆ ಶಿಪಾರಸ್ಸು ಮಾಡಿತ್ತು. ಇದಕ್ಕನುಗುಣವಾಗಿ ಕೇಂದ್ರ ಅರಣ್ಯ ಇಲಾಖೆ ಇಂದು ಕರ್ನಾಟಕದ ಅರಣ್ಯ ಇಲಾಖೆಗೆ ಪತ್ರ ಮುಖೇನ ತಿಳಿಸಿದೆ.

ತುಮಕೂರು ಜಲ್ಲೆಯಲ್ಲಿನ ಬುಕ್ಕಾಪಟ್ಟಣದಿಂದ ಚಿಂಕಾರದವರೆಗಿನ ವನ್ಯ ಜೀವಿ ಸರಂಕ್ಷಣಾ ಕ್ಷೇತ್ರದ 51.32 ಹೆಕ್ಕೆರ್ ಪ್ರದೇಶವನ್ನು ಬಳಸಿಕೊಳ್ಳಲು ಅನುಮತಿ ನೀಡಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ಸೋಮಣ್ಣನವರು ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ನೀರಾವರಿ ಅಭಿವೃದ್ಧಿಯ ದಿಶೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ತುಮಕೂರಿನ ಸಮಸ್ತ ಜನತೆಗೆ ಈ ಒಂದು ವರದಾನ ನೀಡಿದೆ ಎಂದು ತುಮಕೂರು ಜಿಲ್ಲೆಯ ಸಂಸದರೂ ಆಗಿರುವ ಸೋಮಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ ಪ್ರಧಾನಿ ಮೋದಿ, ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಮತ್ತು ಸ್ಥಾಯಿ ಸಮಿತಿ, ರಾಷ್ಟ್ರೀಯ ವನ್ಯ ಜೀವಿ ಮಂಡಳಿಯ ಎಲ್ಲಾ ಸದಸ್ಯರಿಗೆ ಕನ್ನಡನಾಡಿನ ಹಾಗೂ ವಿಶೇಷವಾಗಿ ತುಮಕೂರಿನ ಜನತೆಯ ಪರವಾಗಿ ಅಭಿನಂದನೆಯನ್ನು ಸೋಮಣ್ಣ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT