ಡಿಕೆ.ಶಿವಕುಮಾರ್  
ರಾಜ್ಯ

ಚಿನ್ನವಾಗಲಿದೆ ನಿಮ್ಮ ಭೂಮಿ, ಮಾರಿಕೊಳ್ಳದಿರಿ: ರಾಮನಗರ ರೈತರಿಗೆ ಡಿ.ಕೆ ಶಿವಕುಮಾರ್ ಸಲಹೆ

ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ದೆಹಲಿಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ.

ಬೆಂಗಳೂರು: ಶೀಘ್ರದಲ್ಲೇ ನಿಮ್ಮ ಭೂಮಿ ಚಿನ್ನವಾಗಿ ಮಾರ್ಪಡಲಿದೆ, ಮಾರಾಟ ಮಾಡದಿರಿ ಎಂದು ರಾಮನಗರ ರೈತರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದ್ದಾರೆ.

ಕನಕಪುರದಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ದೆಹಲಿಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ ಬಂದ ನಂತರ ನಿಮ್ಮ ಭೂಮಿ ಚಿನ್ನದ ಬೆಲೆ ಪಡೆಯಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಆಸ್ತಿ ಮಾರಿಕೊಳ್ಳಬೇಡಿ, ಉಳಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಜಿಲ್ಲೆಗೆ ಕೇಂದ್ರ ಗೃಹ ಸಚಿವಾಲಯದಿಂದ ಗುಪ್ತಚರ ಇಲಾಖೆಯವರು ವರದಿ ಕಳುಹಿಸುವುದು ಬಾಕಿ ಇದೆ. ಈ ಕುರಿತು ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗೆ ಪತ್ರ ಬರೆಯುತ್ತೇನ. ನಂತರ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಅಧಿಕೃತವಾಗಿ ಘೋಷಣೆಯಾಗಲಿದೆ. ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಉಳಿಯಲಿದೆ’ ಎಂದು ತಿಳಿಸಿದರು.

ನಾವು ಬೆಂಗಳೂರಿನವರು, ನಮ್ಮ ಈ ಗುರುತನ್ನು ನಾವು ಯಾಕೆ ಬಿಟ್ಟುಕೊಡಬೇಕು? ಭವಿಷ್ಯದಲ್ಲಿ ನಿಮ್ಮ ಜಮೀನಿನ ಬೆಲೆ ಏನಾಗುತ್ತದೆ ಎಂದು ನೀವು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬಹಳ ಟೀಕೆ ಟಿಪ್ಪಣಿ ಮಾಡುತ್ತಿದ್ದಾರೆ. ಹಾಗಿದ್ದರೆ ಇವರುಗಳು ತಮ್ಮ ಊರು ಬಿಟ್ಟು ಇಲ್ಲಿಗೆ ಬಂದು ಯಾಕೆ ನೂರಾರು ಎಕರೆ ಜಮೀನು ಖರೀದಿ ಮಾಡಿದ್ದಾರೆ?' ಎಂದು ಪ್ರಶ್ನಿಸಿದರು.

15 ರಿಂದ 20 ವರ್ಷಗಳ ಹಿಂದೆ ಈ ಪ್ರದೇಶದಲ್ಲಿ ಭೂಮಿಯ ಬೆಲೆ ಎಷ್ಟಿತ್ತು? ಈಗ ಅದರ ಬೆಲೆ ಎಷ್ಟು? ನಾನು ನಿಮಗೆ ನೇರವಾಗಿ ಹಣ ನೀಡಲು ಸಾಧ್ಯವಾಗದಿದ್ದರೂ, ನಿಮ್ಮ ಆಸ್ತಿಯ ಬೆಲೆಯನ್ನು ಹೆಚ್ಚಿಸುವ ಮೂಲಕ ನಿಮಗೆ ಸಹಾಯ ಮಾಡಿದ್ದೇನೆ. ಹೀಗಾಗಿ, ನಾನು ನಿಮ್ಮ ಜೀವನದಲ್ಲಿ ಬದಲಾವಣೆಯನ್ನು ತಂದಿದ್ದೇನೆ ಎಂದು ಹೇಳಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT