ಅಪಘಾತ (ಸಾಂದರ್ಭಿಕ ಚಿತ್ರ) 
ರಾಜ್ಯ

ನಗರದಲ್ಲಿ ಸರಣಿ ಅಪಘಾತ: ಐವರಿಗೆ ಗಾಯ

ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.

ಬೆಂಗಳೂರು: ನಗರದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಫ್‌ಸಿ ಜಂಕ್ಷನ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.

ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಬಳಿಕ ಹೆಚ್ಚಿನ ಹಾನಿ ತಪ್ಪಿಸುವ ಸಲುವಾಗಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನಲ್ಲಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರಿಗೆ ಗಾಯಗೊಂಡಿದೆ.

ಘಟನೆ ಬಳಿಕ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೂರು ವಾಹನಗಳನ್ನು ವಶಪಡಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT