ಅಪಘಾತ (ಸಾಂದರ್ಭಿಕ ಚಿತ್ರ) 
ರಾಜ್ಯ

ನಗರದಲ್ಲಿ ಸರಣಿ ಅಪಘಾತ: ಐವರಿಗೆ ಗಾಯ

ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.

ಬೆಂಗಳೂರು: ನಗರದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೀವನ್ ಭೀಮಾ ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಫ್‌ಸಿ ಜಂಕ್ಷನ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.

ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಬಳಿಕ ಹೆಚ್ಚಿನ ಹಾನಿ ತಪ್ಪಿಸುವ ಸಲುವಾಗಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನಲ್ಲಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರಿಗೆ ಗಾಯಗೊಂಡಿದೆ.

ಘಟನೆ ಬಳಿಕ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೂರು ವಾಹನಗಳನ್ನು ವಶಪಡಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

SCROLL FOR NEXT