ಗಾಯಗೊಂಡ ಹಸುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಸಚಿವ ಜಮೀರ್. 
ರಾಜ್ಯ

ಹಸುಗಳ ಕೆಚ್ಚಲು ಕೊಯ್ದ ಘಟನೆ: ಮಾಲೀಕರಿಗೆ ವೈಯಕ್ತಿಕ ಪರಿಹಾರ ಕೊಡುತ್ತೇನೆಂದ ಸಚಿವ ಜಮೀರ್

ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್‌ಗೆ ಕರೆ ಮಾಡಿ ಹೇಳಿದ್ದಾರೆ. ಕೃತ್ಯ ಎಸಗಿದವರು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ ಎಂದು ಹೇಳಿದರು.

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಗಳು ಬಳ್ಳಾರಿಯಲ್ಲಿ ಇದ್ದೆವು. ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್‌ಗೆ ಕರೆ ಮಾಡಿ ಹೇಳಿದ್ದಾರೆ. ಕೃತ್ಯ ಎಸಗಿದವರು ಯಾರೇ ಆಗಿರಲಿ, ಕೂಡಲೇ ಬಂಧಿಸುವಂತೆ ಹೇಳಿದ್ದಾರೆ ಎಂದು ಹೇಳಿದರು.

ಪ್ರಾಣಿಗಳ ಮೇಲೆ ಯಾಕೆ ದ್ವೇಷ, ಈ ರೀತಿ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ರೀತಿ ಮಾಡಬಾರದು. ನಾನು ಕೂಡ ಪೊಲೀಸರಿಗೆ ಹೇಳಿದ್ದೇನೆ. ಯಾರೇ ಆದರೂ ಅವರ ಮೇಲೆ ಕಠಿಣ ಕ್ರಮ ಆಗಬೇಕು‌. ಮಾಲೀಕನಿಗೆ ವೈಯಕ್ತಿಕವಾಗಿ ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ. ಅವರ ಕುಟುಂಬದ ಜೊತೆಗೆ ನಾನು ಇದೀನಿ ಎಂದು ತಿಳಿಸಿದರು. ಇದೇ ವೇಳೆ ಹಸು ಕೊಡಿಸೋ ಜವಾಬ್ದಾರಿ ನಿನ್ನದು ಎಂದು ವಿನಯ್ ಎಂಬಾತನಿಗೆ ಜಮೀರ್ ಅವರು ಸೂಚನೆ ನೀಡಿದರು.

ಆರೋಗ್ಯ ಸಚಿವ ಖಂಡನೆ

ಘಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ. ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯ. ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಹೇಳಿದ್ದಾರೆ.

ಈ ಕೃತ್ಯವೆಸಗಿದ ಪಾಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು. ಪಾಪಿಗಳ ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ದುಷ್ಕೃತ್ಯವೆಸಗಿದ ಕಿರಾತಕರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!