ನಾಲ್ಕು ಮಕ್ಕಳು ನೀರುಪಾಲು 
ರಾಜ್ಯ

ವಿಜಯಪುರ: ಕರುಳ ಬಳ್ಳಿಯನ್ನೇ ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ; 4 ಮಕ್ಕಳು ನೀರುಪಾಲು

ಮೃತ ಮಕ್ಕಳನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ 5 ವರ್ಷದ ತನು ನಿಂಗರಾಜ‌ ಭಜಂತಿ, ಮೂವರು ವರ್ಷದ ರಕ್ಷಾ ನಿಂಗರಾಜ ಭಜಂತ್ರಿ ಹಾಗೂ 13 ತಿಂಗಳ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ ಎಂದು ಗುರುತಿಸಲಾಗಿದೆ.

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತ ತಾಯಿಯೊಬ್ಬಳು ಮಕ್ಕಳ ಸಮೇತ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು. ಘಟನೆಯಲ್ಲಿ ನಾಲ್ಕು ಮಕ್ಕಳು ಸಾವನ್ನಪ್ಪಿವೆ. ಇನ್ನು ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಮೃತ ಮಕ್ಕಳನ್ನು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ 5 ವರ್ಷದ ತನು ನಿಂಗರಾಜ‌ ಭಜಂತಿ, ಮೂವರು ವರ್ಷದ ರಕ್ಷಾ ನಿಂಗರಾಜ ಭಜಂತ್ರಿ ಹಾಗೂ 13 ತಿಂಗಳ ಮಕ್ಕಳಾದ ಹಸೇನ ನಿಂಗರಾಜ ಭಜಂತ್ರಿ ಹಾಗೂ ಹುಸೇನ ನಿಂಗರಾಜ ಭಜಂತ್ರಿ ಎಂದು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿಯ, ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಘಟನೆ ನಡೆದಿದೆ. ಮಕ್ಕಳನ್ನು ಕಾಲುವೆಗೆ ಎಸೆದಿದ್ದನ್ನು ನೋಡಿದ ಸ್ಥಳೀಯರು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮಕ್ಕಳು ನೀರುಪಾಲಾಗಿದ್ದವು. ಆದರೆ ತಾಯಿ ಭಾಗ್ಯ ಭಜಂತ್ರಿಯನ್ನು ರಕ್ಷಿಸಿದ್ದಾರೆ.

ಕೌಟುಂಬಿಕ ಕಲಹಕ್ಕೆ ಬೇಸತ್ತ ಭಾಗ್ಯ ಈ ಕೃತ್ಯ ಎಸಗಿದ್ದಾಳೆ ಎಂದು ಶಂಕಿಸಲಾಗಿದೆ. ಸದ್ಯ ಸ್ಥಳೀಯ ಮೀನುಗಾರರು ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಗಂಡು ಮಕ್ಕಳ ಮೃತದೇಹಕ್ಕಾಗಿ ಹುಡುಕಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!