ಬಿಬಿಎಂಪಿ ಕಚೇರಿ 
ರಾಜ್ಯ

ಲೋಕಾಯುಕ್ತ ದಾಳಿ ಬಳಿಕ ಇಬ್ಬರು ಬಿಬಿಎಂಪಿ ಅಧಿಕಾರಿಗಳ ಅಮಾನತು

ನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಮ್ಮನ ಬದಲಿಗೆ ಅವರ ಮಗ ನವೀನ್ ಕಚೇರಿ ಲಾಗಿನ್ ಐಡಿ ಪಡೆದು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು.

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ನಿರ್ದೇಶನದ ಮೇರೆಗೆ ಪಾಲಿಕೆ ಆಡಳಿತ ಇಲಾಖೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಜನವರಿ 10ರಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಬಿಬಿಎಂಪಿಯ 54 ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು.

ನಗರದ ಸೌತ್ ಎಂಡ್ ಸರ್ಕಲ್‌ನಲ್ಲಿರುವ ಸಹಾಯಕ ಕಂದಾಯ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಮ್ಮನ ಬದಲಿಗೆ ಅವರ ಮಗ ನವೀನ್ ಕಚೇರಿ ಲಾಗಿನ್ ಐಡಿ ಪಡೆದು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು.

ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಸಿದ್ದಾಪುರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಕ್ರಮವಾಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್ ನನ್ನು ಬಂಧಿಸಿದ್ದಾರೆ.

ತನ್ನ ಬದಲಿಗೆ ತನ್ನ ಮಗನಿಂದ ಕಚೇರಿಯಲ್ಲಿ ಕೆಲಸ ಮಾಡಿಸುತ್ತಿದ್ದ ಸಹಾಯಕ ಕಂದಾಯ ಅಧಿಕಾರಿ ಸುಜಾತಾ ಹಾಗೂ ಎಸ್ ಡಿಎ ಕವಿತಾ ಅವರನ್ನು ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT