ಅನಧಿಕೃತ ಫ್ಲೆಕ್ಸ್. 
ರಾಜ್ಯ

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಹಾಕುವವರ ವಿರುದ್ಧ FIR ದಾಖಲಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕುವ ಅಗತ್ಯವನ್ನು ಒತ್ತಿ ಹೇಳಿದರು.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕುವ ಅಗತ್ಯವನ್ನು ಒತ್ತಿ ಹೇಳಿದರು. ಅಲ್ಲದೆ, ಪದೇ ಪದೇ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಟಿನ್ ಟೌನ್‌ನ ನಂದನ್ ಮೈದಾನ, ಹಲಸೂರು, ಅಶೋಕ್ ನಗರ ಮತ್ತು ಶಾಂತಿ ನಗರದಾದ್ಯಂತ ಬಿಡಿಎ ಅಧ್ಯಕ್ಷ ಮತ್ತು ಶಾಸಕ ಎನ್‌ಎ ಹ್ಯಾರಿಸ್ ಅವರ ಹುಟ್ಟುಹಬ್ಬದ ಆಚರಣೆ ಕುರಿತು ಅನಧಿಕೃತ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಕಂಡು ಬಂದಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು, ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತು ಇರದಂತೆ ನೋಡಿಕೊಳ್ಳಬೇಕು. ವಲಯಗಳಲ್ಲಿ ಜಾಹೀರಾತುಗಳನ್ನು ತೆರವುಗೊಳಿಸಿ, ಅದನ್ನು ಅಳವಡಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಮತ್ತೆ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಆಸ್ತಿ ವಹಿವಾಟುಗಳಿಗೆ ಇ–ಖಾತಾ ಕಡ್ಡಾಯಗೊಳಿಸಿರುವುದರಿಂದ, ಭದ್ರತೆ, ಪುನರ್‌ನಿರ್ಮಾಣ, ಭದ್ರತೆ ಬಡ್ಡಿ ಜಾರಿ ಕಾಯ್ದೆ 2002 (ಸರ್ಫೇಸಿ ಕಾಯ್ದೆ) ನಿಬಂಧನೆಗಳ ಅಡಿ ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಆಸ್ತಿಗಳ ಮಾರಾಟ ಪ್ರಮಾಣ ಪತ್ರ ನೋಂದಾಯಿಸಲು ಅನುವಾಗುವಂತೆ, ಬಿಬಿಎಂಪಿ ಇ–ಖಾತಾ ವಿಧಾನವನ್ನು ರಚಿಸಬೇಕು. ಒಂದು ಸ್ವತ್ತನ್ನು ಅಡಮಾನವಿಟ್ಟು ಪಡೆದ ಸಾಲವನ್ನು ಮರು ಪಾವತಿ ಮಾಡಲು ವಿಫಲವಾದಾಗ, ಬ್ಯಾಂಕ್‌ಗಳು ಮಾರಾಟ ಪ್ರಮಾಣದ ಮೂಲಕ ಮಾರಾಟವನ್ನು ಕಾರ್ಯಗತಗೊಳಿಸುತ್ತವೆ. ಎಲ್ಲ ನೋಂದಣಿಗೂ ಇ–ಖಾತಾ ಕಡ್ಡಾಯವಾಗಿರುವುದರಿಂದ ಕೆಲವು ಬಾರಿ ಖಾತಾದಾರ ಸಹಕರಿಸದಿರಬಹುದು. ಆದ್ದರಿಂದ ಹಣಕಾಸು ಸಂಸ್ಥೆಗಳಿಗೆ ಅನುಕೂಲವಾಗಲು ಇ–ಖಾತಾ ಪ್ರಕ್ರಿಯೆಯಲ್ಲಿ ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಇದಲ್ಲದೆ, ಬಿಬಿಎಂಪಿ ಮಿತಿಯಲ್ಲಿ ಆಸ್ತಿ ತೆರಿಗೆ ತಪ್ಪಿಸುವ ಮಾಲೀಕರು. "ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಆಸ್ತಿಗಳ ಸಂಖ್ಯೆಯನ್ನು ಗುರುತಿಸಿ, ಅವುಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆಯೂ ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT