ಸಚಿವ ಸತೀಶ್ ಜಾರಕಿಹೊಳಿ 
ರಾಜ್ಯ

ಸತೀಶ್‌ ಜಾರಕಿಹೊಳಿ ಸಿಎಂ ಆಗಬೇಕು: ಶಬರಿಮಲೆ ಅಯ್ಯಪ್ಪಸ್ವಾಮಿಗೆ ಮೊರೆ ಹೋದ ಬೆಂಬಲಿಗರು..!

ಒಂದೆಡೆ ಕಾರ್ಯಕರ್ತರು ಸಭೆ ಸಮಾರಂಭಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು 'ಮುಂದಿನ ಸಿಎಂ ಜಾರಕಿಹೊಳಿ' ಎಂದು ಘೋಷಣೆ ಕೂಗುತ್ತಿದ್ದರೆ. ಮತ್ತೊಂದೆಡೆ ಮತ್ತಷ್ಟು ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತಾರಕಕ್ಕೇರಿರುವ ನಡುವಲ್ಲೇ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಮುಖ್ಯಮಂತ್ರಿಯಾಗಬೇಕೆಂಬ ಕೂಗು ಜೋರಾಗಿ ಕೇಳಿ ಬರುತ್ತಿದೆ.

ಒಂದೆಡೆ ಕಾರ್ಯಕರ್ತರು ಸಭೆ ಸಮಾರಂಭಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು 'ಮುಂದಿನ ಸಿಎಂ ಜಾರಕಿಹೊಳಿ' ಎಂದು ಘೋಷಣೆ ಕೂಗುತ್ತಿದ್ದರೆ. ಮತ್ತೊಂದೆಡೆ ಮತ್ತಷ್ಟು ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ.

ಬೆಳಗಾವಿಯಲ್ಲಿ ಅಯ್ಯಪ್ಪ ಮಾಲಾಧಾರಿ ವ್ಯಕ್ತಿಯೊಬ್ಬರು ಸತೀಶ್ ಜಾರಕಿಹೊಳಿ ಸಿಎಂ ಆಗಬೇಕೆಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಮೊರೆ ಹೋಗಿದ್ದಾರೆ.

ಗೋಕಾಕ ಪಟ್ಟಣದ ಅಯ್ಯಪ್ಪ ಮಾಲಾಧಾರಿಯಾಗಿರುವ ಸಂತೋಷ ಸಂಕಪಾಳೆ ಎಂಬುವವರು ಜಾರಕಿಹೊಳಿ ಮುಂದಿನ ಸಿಎಂ ಆಗಬೇಕು ಎಂದು ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ಸತೀಶ್ ಜಾರಕಿಹೊಳಿ ಫೋಟೋ ತಲೆಮೇಲೆ ಹೊತ್ತುಕೊಂಡು ಹೋಗಿದ್ದಾರೆ. ಈ ಕುರಿತ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಐದು ದಿನ ಇರಾನ್ Power Plant ಗಳ ಮೇಲೆ ದಾಳಿ ಮಾಡಲ್ಲ..': Trump ತಾತ್ಕಾಲಿಕ ಕದನ ವಿರಾಮ ಘೋಷಣೆ! ಮಾತುಕತೆ ನಿರಾಕರಿಸಿದ ಇರಾನ್

ಇರಾನ್ ಮೇಲಿನ ದಾಳಿ ಐದು ದಿನ ತಾತ್ಕಾಲಿಕ ಸ್ಥಗಿತ: ಶಾಂತಿ ಸ್ಥಾಪನೆಗಾಗಿ ಪಾಕಿಸ್ತಾನ, ಟರ್ಕಿ, ಈಜಿಪ್ಟ್ ಮಧ್ಯಸ್ಥಿಕೆ!

West Asia Crisis: ಮುಳುಗಿದ D-Street; 13.5 ಲಕ್ಷ ಕೋಟಿ ನಿರ್ನಾಮ!

Gold Rate: ಚಿನ್ನ-ಬೆಳ್ಳಿ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ; 40 ವರ್ಷಗಳಲ್ಲಿ ಇದೇ ಮೊದಲು!

ಇರಾನ್ ಯುದ್ಧ: ಅಮೆರಿಕ ಅಧ್ಯಕ್ಷ Donald Trump ಕದನ ವಿರಾಮ ಘೋಷಣೆ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಭಾರಿ ಇಳಿಕೆ..!

SCROLL FOR NEXT