ಬಾಳೆಹಣ್ಣುಗಳು 
ರಾಜ್ಯ

ಬಾಳೆಹಣ್ಣುಗಳನ್ನು ನಿಷೇಧಿಸಿದ ಹಂಪಿ ವಿರೂಪಾಕ್ಷ ದೇವಾಲಯ; ಕಾರಣ ಹೀಗಿದೆ...

ಬಾಳೆಹಣ್ಣು ನಿಷೇಧವನ್ನು ನಿಮ್ಮ ಸಂದರ್ಭಕ್ಕೆ ತಕ್ಕಂತೆ ತೆಗೆದುಕೊಂಡು ವಿವಾದ ಮಾಡಬೇಡಿ ಎಂದು ಹನುಮಂತಪ್ಪ ಮನವಿ ಮಾಡಿದರು.

ಹಂಪಿ: ಭಕ್ತರು ದೇವಾಲಯದ ಆನೆಗೆ ಅತಿಯಾಗಿ ಬಾಳೆಹಣ್ಣು ತಿನ್ನಿಸುತ್ತಿದ್ದಾರೆ ಮತ್ತು ಪೂಜಾ ಸ್ಥಳವು ಬಾಳೆಹಣ್ಣಿನ ಸಿಪ್ಪೆಯಿಂದ ತುಂಬಿಹೋಗುತ್ತಿರುವುದರಿಂದ ಹಂಪಿಯಲ್ಲಿರುವ 7ನೇ ಶತಮಾನದ ಶಿವನ ದೇಗುಲವು ತನ್ನ ಆವರಣದೊಳಗೆ ಬಾಳೆಹಣ್ಣುಗಳನ್ನು ನಿಷೇಧಿಸಿದೆ.

ದೇವಸ್ಥಾನ, ಆನೆ ಹಾಗೂ ಭಕ್ತರ ಹಿತದೃಷ್ಟಿಯಿಂದ ಬಾಳೆಹಣ್ಣಿಗೆ ನಿಷೇಧ ಹೇರಲು ನಿರ್ಧರಿಸಲಾಗಿದೆ ಎಂದು ವಿರೂಪಾಕ್ಷ ದೇವಸ್ಥಾನದ ಆಡಳಿತ ಮಂಡಳಿ ಗುರುವಾರ ತಿಳಿಸಿದೆ.

'ಭಕ್ತರು ಉತ್ಸಾಹದಿಂದ ಆನೆಗೆ ಅತಿಯಾಗಿ ಆಹಾರ ನೀಡುವ ಪ್ರಯತ್ನದಲ್ಲಿರುವುದನ್ನು ನಾವು ನೋಡಿದ್ದೇವೆ. ಇದು ಆನೆಗೆ ಹಾನಿಕಾರಕ ಮಾತ್ರವಲ್ಲ, ಈ ಇದು ಸ್ಥಳವನ್ನು ತುಂಬಾ ಕೊಳಕು ಮಾಡುತ್ತದೆ. ಭಕ್ತರು ಬಾಳೆಹಣ್ಣಿನ ಸಿಪ್ಪೆಗಳು ಮತ್ತು ಅವರು ಬಾಳೆಹಣ್ಣುಗಳನ್ನು ತಂದ ಪ್ಲಾಸ್ಟಿಕ್ ಚೀಲಗಳನ್ನು ಸಹ ಇಲ್ಲಿಯೇ ಬಿಡುತ್ತಾರೆ' ಎಂದು ದೇವಸ್ಥಾನದ ದತ್ತಿ ಅಧಿಕಾರಿ ಹನುಮಂತಪ್ಪ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಬಾಳೆಹಣ್ಣನ್ನು ನಿಷೇಧಿಸಿರುವ ಕುರಿತು ವರದಿಗಳು ಹೊರಬಂದಾಗಿನಿಂದ, ಈ ಬಗ್ಗೆ ಕೇಳಲು ಸಾಕಷ್ಟು ಕರೆಗಳು ಬರುತ್ತಿವೆ. ಬಾಳೆಹಣ್ಣು ನಿಷೇಧವನ್ನು ನಿಮ್ಮ ಸಂದರ್ಭಕ್ಕೆ ತಕ್ಕಂತೆ ತೆಗೆದುಕೊಂಡು ವಿವಾದ ಮಾಡಬೇಡಿ ಎಂದು ಹನುಮಂತಪ್ಪ ಮನವಿ ಮಾಡಿದರು.

'ಇದು ಸ್ಥಳೀಯ ವಿಷಯವಾಗಿದ್ದು, ನಮ್ಮ ದೇವಸ್ಥಾನದ ಆವರಣದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ನಾವು ನಿರ್ಧಾರ ತೆಗೆದುಕೊಂಡಿದ್ದೇವೆ' ಎಂದು ಹನುಮಂತಪ್ಪ ಹೇಳಿದರು.

ವಿರೂಪಾಕ್ಷ ದೇವಾಲಯವನ್ನು ಸಾಮಾನ್ಯವಾಗಿ 'ದಕ್ಷಿಣ ಕಾಶಿ' ಎಂದು ಕರೆಯಲಾಗುತ್ತದೆ ಮತ್ತು ಇಲ್ಲಿಗೆ ಪ್ರತಿದಿನ ಕನಿಷ್ಠ 5,000 ಭಕ್ತರು ಭೇಟಿ ನೀಡುತ್ತಾರೆ. ವಿಶೇಷ ದಿನಗಳು ಮತ್ತು ವಾರಾಂತ್ಯಗಳಲ್ಲಿ, ಜನಸಂದಣಿಯು ಮತ್ತಷ್ಟು ಹೆಚ್ಚಾಗುತ್ತದೆ. ಆಗ ದಿನಕ್ಕೆ 50,000 ಸಹ ತಲುಪುತ್ತದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT