ನಟ ದರ್ಶನ್ 
ರಾಜ್ಯ

ಆತ್ಮರಕ್ಷಣೆಗಾಗಿ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ: ಪೊಲೀಸರಿಗೆ ನಟ ದರ್ಶನ್ ಮನವಿ

ಪೊಲೀಸರ ನೋಟೀಸ್ ಗೆ ಉತ್ತರಿಸಿರುವ ದರ್ಶನ್, ನಾನು ಸೆಲಿಬ್ರಿಟಿಯಾಗಿರುವ ಕಾರಣ ಹೋದೆಡೆಯೆಲ್ಲ ಜನ ಸೇರುತ್ತಾರೆ. ಖಾಸಗಿ ಸೆಕ್ಯೂರಿಟಿ ಇದ್ದರೂ, ಆತ್ಮರಕ್ಷಣೆಗಾಗಿ ನನಗೆ ಗನ್ ಬೇಕು ಎಂದಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ತೂಗುದೀಪ ಅವರು ತಮ್ಮ ಆತ್ಮರಕ್ಷಣೆಗಾಗಿ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಬೆಂಗಳೂರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕೊಲೆ ಅರೋಪದಲ್ಲಿ ಬಂಧನವಾದಾಗಲೇ ನಟ ದರ್ಶನ್ ಆತ್ಮರಕ್ಷಣೆಗಾಗಿ ಇಟ್ಟುಕೊಂಡಿದ್ದ ಗನ್ ಅನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದು, ಲೈಸೆನ್ಸ್ ರದ್ದು ಮಾಡಬೇಕೆಂಬ ನಿರ್ಧಾರ ತೆಗೆದುಕೊಂಡಿದ್ದರು.

ಕೊಲೆ ಆರೋಪಿ ದರ್ಶನ್ ಜೈಲಲ್ಲಿದ್ದ ಕಾರಣ ಈ ವಿಷಯ ಕೊಂಚ ನೆನೆಗುದಿಗೆ ಬಿದ್ದಿತ್ತು. ಈಗ ಅವರು ಜಾಮೀನು ಪಡೆದು ಹೊರಬಂದಿರುವ ಹಿನ್ನೆಲೆಯಲ್ಲಿ ತಮ್ಮ ಬಳಿಯಿರುವ ಗನ್ ಬಳಸಿ ಸಾಕ್ಷಿಗಳನ್ನು ಹೆದರಿಸುವ ಸಾಧ್ಯತೆ ಇದೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಯಾಕೆ ರದ್ದು ಮಾಡಬಾರದು ಎಂದು ಜನವರಿ 7ರಂದು ದರ್ಶನ್ ಗೆ ಪೊಲೀಸರು ನೋಟೀಸೊಂದನ್ನು ನೀಡಿದ್ದರು.

ಪೊಲೀಸರ ನೋಟೀಸ್ ಗೆ ಉತ್ತರಿಸಿರುವ ದರ್ಶನ್, ನಾನು ಸೆಲಿಬ್ರಿಟಿಯಾಗಿರುವ ಕಾರಣ ಹೋದೆಡೆಯೆಲ್ಲ ಜನ ಸೇರುತ್ತಾರೆ. ಖಾಸಗಿ ಸೆಕ್ಯೂರಿಟಿ ಇದ್ದರೂ, ಆತ್ಮರಕ್ಷಣೆಗಾಗಿ ನನಗೆ ಗನ್ ಬೇಕು. ಲೈಸನ್ಸ್ ರದ್ದು ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT