ಶಮಾ-ರಿಯಾಜ್ ಪಠಾಣ್ 
ರಾಜ್ಯ

ಬೆಳಗಾವಿ: ಎರಡನೇ ಪತ್ನಿಯನ್ನು ಮೆಚ್ಚಿಸಲು ಮೊದಲ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ ರಿಯಾಜ್!

ಧಾರವಾಡ ಮೂಲದ ಶಮಾ ಹತ್ತು ವರ್ಷದ ಹಿಂದೆ ಶಿಗ್ಗಾವಿಯ ರಿಯಾಜ್ ಪಠಾಣ್ ನನ್ನು ವಿವಾಹವಾಗಿದ್ದಳು. ದಂಪತಿಗೆ ಇಬ್ಬರು ಹೆಣ್ಣು ಹಾಗೂ ಒಬ್ಬ ಮಗ ಸೇರಿ ಮೂವರು ಮಕ್ಕಳಿದ್ದಾರೆ. ಕೆಲಸಕ್ಕೆಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮಕ್ಕೆ ದಂಪತಿ ಬಂದು ನೆಲಸಿದ್ದರು.

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಪತಿಯೇ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಎರಡನೇ ಹೆಂಡತಿಯನ್ನು ಬಿಟ್ಟು ತನ್ನ ಬಳಿಯೇ ಇರುವಂತೆ ಪೀಡಿಸುತ್ತಿದ್ದ ಮೊದಲ ಪತ್ನಿ ಶಮಾ ರಿಯಾಜ್ ಪಠಾಣ್ ಹತ್ಯೆ ಮಾಡಿ ಇದೀಗ ಆರೋಪಿ ರಿಯಾಜ್ ಪಠಾಣ್ ಜೈಲು ಸೇರಿದ್ದಾನೆ.

ಧಾರವಾಡ ಮೂಲದ ಶಮಾ ಹತ್ತು ವರ್ಷದ ಹಿಂದೆ ಶಿಗ್ಗಾವಿಯ ರಿಯಾಜ್ ಪಠಾಣ್ ನನ್ನು ವಿವಾಹವಾಗಿದ್ದಳು. ದಂಪತಿಗೆ ಇಬ್ಬರು ಹೆಣ್ಣು ಹಾಗೂ ಒಬ್ಬ ಮಗ ಸೇರಿ ಮೂವರು ಮಕ್ಕಳಿದ್ದಾರೆ. ಕೆಲಸಕ್ಕೆಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮಕ್ಕೆ ದಂಪತಿ ಬಂದು ನೆಲಸಿದ್ದರು. ರಿಯಾಜ್ ರಸ್ತೆ ಬದಿ ವಾಚ್, ಕನ್ನಡಗಳನ್ನು ಮಾರುತ್ತ ಜೀವನ ಸಾಗಿಸುತ್ತಿದ್ದನು. ಆದರೆ ಒಂದೂವರೆ ವರ್ಷದ ಹಿಂದೆ ಫರ್ಜಾನಾ ಎಂಬುವಳನ್ನು ರಿಯಾಜ್ ಗುಟ್ಟಾಗಿ ಮದುವೆ ಮಾಡಿಕೊಂಡಿದ್ದಾನೆ. ಈ ವಿಚಾರ ತಿಳಿದ ಶಮಾ ಆಕೆಯನ್ನು ಬಿಟ್ಟು ತನ್ನ ಜೊತೆ ಇರುವಂತೆ ಪೀಡಿಸುತ್ತಿದ್ದಳು. ಈ ವಿಚಾರವನ್ನು ರಿಯಾಜ್ ಫರ್ಜಾನಾಗೆ ಹೇಳಿದ್ದಾನೆ. ಇದಕ್ಕೆ ಶಮಾಳನ್ನು ಹತ್ಯೆ ಮಾಡುವಂತೆ ಫರ್ಜಾನಾ ಹೇಳಿದ್ದಾಳೆ.

ಅದರಂತೆ ನಿನ್ನೆ ರಾತ್ರಿ ಶಮಾಳ ಮನೆಗೆ ಬಂದ ರಿಯಾಜ್ ಆಕೆ ಮಲಗಿದ ಮೇಲೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ನಂತರ ಮನೆಯಲ್ಲಿದ್ದ ಮಗನ್ನು ಕರೆದುಕೊಂಡು ಫರ್ಜಾನಾಳ ಮನೆಗೆ ಹೋಗಿ ಅಲ್ಲಿಂದ ದಂಪತಿ ಊರು ಬಿಟ್ಟು ಹೋಗಿದ್ದಾರೆ. ಇನ್ನು ಇಬ್ಬರು ಹೆಣ್ಣು ಮಕ್ಕಳು ಅಜ್ಜಿ ಮನೆಯಲ್ಲಿದ್ದು ತಾಯಿಯ ಸಾವು ಹಾಗೂ ತಂದೆ ಊರು ಬಿಟ್ಟು ಹೋಗಿದ್ದರಿಂದ ಅನಾಥವಾಗಿದ್ದಾರೆ. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಮುರಗೋಡ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT