ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗಮನ ಬೇರೆಡೆ ಸೆಳೆದು ಚಿನ್ನಾಭರಣ, ನಗದು ದೋಚುತ್ತಿದ್ದ ಆರೋಪಿಗಳ ಬಂಧನ

ಕಳೆದ ವರ್ಷ ನವೆಂಬರ್ 29 ರಂದು ಟಿಸಿ ಪಾಳ್ಯ ಬಳಿ ಈ ಘಟನೆ ನಡೆದಿತ್ತು. ಡಿಸೆಂಬರ್ 11 ರಂದು ಬೂದಿಗೆರೆ ರಸ್ತೆಯ ಬೊಮ್ಮನಹಳ್ಳಿ ಗೇಟ್ ಬಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು: ಜನರ ಗಮನ ಬೇರೆಡೆ ಸೆಳೆದು ನಗದು ಮತ್ತು ಚಿನ್ನಾಭರಣ ದೋಚುತ್ತಿದ್ದ ಐವರು ಸದಸ್ಯರ ತಂಡದ ಇಬ್ಬರನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ.

ದೇವಸಂದ್ರದ ನಿವಾಸಿಯೊಬ್ಬರು ನವೆಂಬರ್‌ 29ರಂದು ಬ್ಯಾಂಕ್‌ನಿಂದ 4 ಲಕ್ಷ ಹಣವನ್ನು ಡ್ರಾ ಮಾಡಿ ಕಾರಿನಲ್ಲಿ ತೆರಳುತ್ತಿದ್ದರು. ಟಿ.ಸಿ.ಪಾಳ್ಯದ ಬಳಿ ಎರಡು ದ್ವಿಚಕ್ರ ವಾಹನಗಳಲ್ಲಿ ಕಾರು ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿಗಳು, ಕಾರಿನ ಟೈಯರ್‌ ಪಂಕ್ಚರ್ ಆಗಿದೆ ಎಂದು ಹೇಳಿದ್ದರು. ಬಳಿಕ ಪಂಕ್ಚರ್ ಹಾಕಿಸಿ ಹಣ ಕೊಡಲು ಹೋದಾಗ ಕಾರಿನ ಡ್ಯಾಶ್‌ಬೋರ್ಡ್‌ನಲ್ಲಿದ್ದ ಹಣವನ್ನು ಕಳವು ಮಾಡಿಕೊಂಡು ಆರೋಪಿಗಳು ಪರಾರಿ ಆಗಿದ್ದರು.

ಕಳೆದ ವರ್ಷ ನವೆಂಬರ್ 29 ರಂದು ಟಿಸಿ ಪಾಳ್ಯ ಬಳಿ ಈ ಘಟನೆ ನಡೆದಿತ್ತು. ಡಿಸೆಂಬರ್ 11 ರಂದು ಬೂದಿಗೆರೆ ರಸ್ತೆಯ ಬೊಮ್ಮನಹಳ್ಳಿ ಗೇಟ್ ಬಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ಬಳಿಯಿಂದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಮೇ 16 ರಂದು ಕೊತ್ತನೂರಿನಲ್ಲಿ ಇದೇ ಆರೋಪಿಗಳು ದರೋಡೆ ಮಾಡಿದ್ದರು. ಮಹಿಳೆಯೊಬ್ಬರು ಬ್ಯಾಂಕ್‌ನ ಲಾಕರ್‌ನಲ್ಲಿಟ್ಟಿದ್ದ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ತೆಗೆದುಕೊಂಡು ಬ್ಯಾಂಕ್‌ ಮುಂಭಾಗದಲ್ಲಿ ಹೋಗುವಾಗ ಬೈಕ್‌ನಲ್ಲಿ ಬಂದಿದ್ದ ಆರೋಪಿಗಳು ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳಿದ್ದ ಬ್ಯಾಗ್ ಕಸಿದುಕೊಂಡು ಪರಾರಿ ಆಗಿದ್ದರು. ಆ ಆರೋಪಿಗಳು ಇವರೇ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದರು. ಗ್ಯಾಂಗ್ ನ ಇತರ ಸದಸ್ಯರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ