ಕಾವೇರಿ ನೀರು  
ರಾಜ್ಯ

KRS ಡ್ಯಾಂನಿಂದ ಎಕ್ಸ್‌ಪ್ರೆಸ್ ಲೈನ್ ಮೂಲಕ ಬೆಂಗಳೂರು ದಕ್ಷಿಣ, ಉತ್ತರಕ್ಕೆ ಕಾವೇರಿ ನೀರು ಸರಬರಾಜು

ಕೆಆರ್‌ಎಸ್ ಅಣೆಕಟ್ಟಿನಿಂದ ಎಕ್ಸ್‌ಪ್ರೆಸ್ ಪೈಪ್‌ಲೈನ್ ಹಾಕಲು ರಾಜ್ಯ ಸರ್ಕಾರ ಯೋಜಿಸಿದೆ. ಇದು ಕೆಂಗೇರಿ, ಸರ್ಜಾಪುರ, ಆನೇಕಲ್, ನೆಲಮಂಗಲದ ಕೆಲವು ಭಾಗಗಳು, ದೇವನಹಳ್ಳಿ ಮತ್ತು ಹೊಸಕೋಟೆಗೆ ನೀರು ಸರಬರಾಜು ಮಾಡಲು ಅನುವು ಮಾಡಿಕೊಡುತ್ತದೆ.

ಮೈಸೂರು: ಇತ್ತೀಚೆಗೆ ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ ನೀಡಿರುವ ರಾಜ್ಯ ಸರ್ಕಾರ, ಶೀಘ್ರದಲ್ಲೇ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ಎಕ್ಸ್‌ಪ್ರೆಸ್ ಲೈನ್ ಮೂಲಕ ಬೆಂಗಳೂರು ದಕ್ಷಿಣ, ಉತ್ತರಕ್ಕೆ 7 ಟಿಎಂಸಿ ಅಡಿ ನೀರು ಸರಬರಾಜು ಮಾಡಲು ಮುಂದಾಗಿದೆ. ಇದು ಗ್ರೇಟರ್ ಬೆಂಗಳೂರು ಪ್ರದೇಶಗಳಿಗೆ ನೀರು ಪೂರೈಕೆ ಮಾಡಲಿದೆ.

ಕೆಆರ್‌ಎಸ್ ಅಣೆಕಟ್ಟಿನಿಂದ ಎಕ್ಸ್‌ಪ್ರೆಸ್ ಪೈಪ್‌ಲೈನ್ ಹಾಕಲು ರಾಜ್ಯ ಸರ್ಕಾರ ಯೋಜಿಸಿದೆ. ಇದು ಕೆಂಗೇರಿ, ಸರ್ಜಾಪುರ, ಆನೇಕಲ್, ನೆಲಮಂಗಲದ ಕೆಲವು ಭಾಗಗಳು, ದೇವನಹಳ್ಳಿ ಮತ್ತು ಹೊಸಕೋಟೆಗೆ ನೀರು ಸರಬರಾಜು ಮಾಡಲು ಅನುವು ಮಾಡಿಕೊಡುತ್ತದೆ ಮತ್ತು 50 ರಿಂದ 60 ಲಕ್ಷ ಜನಸಂಖ್ಯೆಗೆ ನೀರು ಪೂರೈಕೆ ಮಾಡಲಿದೆ.

ಅಂತರ್ಜಲ ಅಥವಾ ಟ್ಯಾಂಕರ್‌ಗಳು ಮಾತ್ರ ನೀರಿನ ಮೂಲವಾಗಿದ್ದ ಈ ಪ್ರದೇಶಗಳಲ್ಲಿ ವಾಸಿಸುವ ಲಕ್ಷಾಂತರ ಜನ ಕಾವೇರಿ ನೀರಿಗಾಗಿ ಕಾಯುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ತೀವ್ರ ಬರಗಾಲದ ಸಮಯದಲ್ಲಿ ಜನ ಸಂಪೂರ್ಣ ಟ್ಯಾಂಕರ್‌ಗಳ ಮೇಲೆ ಅವಲಂಬಿತರಾಗಿದ್ದರು. ಇದು ಭಾರತದ ಸಿಲಿಕಾನ್ ವ್ಯಾಲಿಯ ವರ್ಚಸ್ಸಿಗೆ ತೀವ್ರ ಹಾನಿಯನ್ನುಂಟುಮಾಡಿತು.

ಈ ಸಂಬಂಧ ಅಧಿಕಾರಿಗಳು ವಿವರವಾದ ಯೋಜನಾ ವರದಿ(ಡಿಪಿಆರ್)ಯನ್ನು ಸಿದ್ಧಪಡಿಸಿದ್ದಾರೆ. ಇದನ್ನು ಹಣಕಾಸು ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಬಜೆಟ್‌ನಲ್ಲಿ ಇದನ್ನು ಘೋಷಿಸುವ ಸಾಧ್ಯತೆಯಿದೆ ಮತ್ತು ಅಂತರ್ಜಲ ಮಟ್ಟವನ್ನು ಬಳಸಿಕೊಳ್ಳುವ ಮತ್ತು ಟ್ಯಾಂಕರ್‌ಗಳನ್ನು ಅವಲಂಬಿಸಿರುವ ಈ ಪ್ರದೇಶಗಳ ನಿವಾಸಿಗಳ ಬೇಡಿಕೆ ಈಡೇರಲಿದೆ.

ಪ್ರಸ್ತಾವಿತ ಈ ಯೋಜನೆಯು ಬೆಂಗಳೂರಿಗೆ ಹೆಚ್ಚುವರಿ ನೀರನ್ನು ಪೂರೈಕೆ ಮಾಡುವುದಲ್ಲದೆ, ಮುಂದಿನ ಎರಡು ದಶಕಗಳ ಕಾಲ ಬೆಳೆಯುತ್ತಿರುವ ನಗರದ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಅದರ ಬೆಳವಣಿಗೆಗೆ ಕೊಡುಗೆ ನೀಡುತ್ತದೆ.

ಕರ್ನಾಟಕಕ್ಕೆ ಕಾವೇರಿ ನದಿಯಿಂದ 284.75 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿರುವುದರಿಂದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಕೆಆರ್‌ಎಸ್‌ನ ಹೆಚ್ಚುವರಿ ನೀರನ್ನು ಬಳಸುತ್ತಿದ್ದೇವೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಚಿಂತನೆ ನಡೆಸಲಾಗಿದ್ದು, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರದ ಬಹುಪಾಲು ಜನಸಂಖ್ಯೆಯನ್ನು ಇದು ಒಳಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮೀಣ ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT