ಗೃಹ ಸಚಿವ ಡಾ ಜಿ ಪರಮೇಶ್ವರ್ 
ರಾಜ್ಯ

ಬೀದರ್ ಶೂಟೌಟ್-ದರೋಡೆ ಪ್ರಕರಣ: ಆರೋಪಿಗಳ ಗುರುತು ಪತ್ತೆ, ಶೀಘ್ರದಲ್ಲೇ ಬಂಧನ- ಸಚಿವ ಪರಮೇಶ್ವರ್

ದರೋಡೆಕೋರ ಇಬ್ಬರು ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಪೊಲೀಸರು ಟ್ರ್ಯಾಕ್ ಮಾಡಿ ಹಿಂಬಾಲಿಸುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್ ಸೇರಿದಂತೆ ಇತರೆ ಪ್ರದೇಶಗಳಿಗ ಪೊಲೀಸರ ತಂಡ ತೆರಳಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಬೆಂಗಳೂರು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ಬ್ಯಾಂಕ್‌ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ, ಹಾಡಹಗಲೇ ದರೋಡೆ ಮಾಡಿ ಆತಂಕ ಮೂಡಿಸಿದ್ದ ಖದೀಮರ ಗುರುತು ಪತ್ತೆಯಾಗಿದ್ದು, ಶೀಘ್ರದಲ್ಲೇ ಬಂಧನಕ್ಕೊಳಪಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರೋಡೆಕೋರ ಇಬ್ಬರು ಆರೋಪಿಗಳ ಗುರುತನ್ನು ಪತ್ತೆ ಹಚ್ಚಲಾಗಿದೆ. ಅವರನ್ನು ಪೊಲೀಸರು ಟ್ರ್ಯಾಕ್ ಮಾಡಿ ಹಿಂಬಾಲಿಸುತ್ತಿದ್ದಾರೆ. ಮಧ್ಯಪ್ರದೇಶದ ಇಂದೋರ್ ಸೇರಿದಂತೆ ಇತರೆ ಪ್ರದೇಶಗಳಿಗ ಪೊಲೀಸರ ತಂಡ ತೆರಳಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆಂದು ಹೇಳಿದರು.

ಬೀದರ್ ನಲ್ಲಿ ದರೋಡೆ ನಡೆಸಿದ ಬಳಿಕ ಆರೋಪಿಗಳು ಹೈದರಾಬಾದ್‌ಗೆ ಪರಾರಿಯಾಗಿದ್ದಾರೆ. ನಗದು ತುಂಬಿದ ಟ್ರಂಕ್ ಅನ್ನು ಹೊತ್ತೊಯ್ದು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಸಾಮಾನ್ಯವಾಗಿ ದೊಡ್ಡ ಮೊತ್ತದ ನಗದು ಸಾಗಿಸುವಾಗ ಬಂದೂಕುಧಾರಿಗಳು ಜೊತೆಯಲ್ಲಿರುತ್ತಾರೆ. ದುರದೃಷ್ಟವಶಾತ್ ನಿನ್ನೆ ವಾಹನದಲ್ಲಿ ಗನ್ ಮ್ಯಾನ್ ಇರಲಿಲ್ಲ. ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ಹಣ ತುಂಬುವ ಕಾರ್ಯವಿಧಾನವನ್ನು ಬಹಳ ಸಮಯದಿಂದ ಪರಿಶೀಲನೆ ಮಾಡಿ, ಸಂಚು ರೂಪಿಸಿರುವಂತೆ ಕಾಣುತ್ತಿದೆ ಎಂದು ತಿಳಿಸಿದರು.

ಬೀದರ್‌ನಲ್ಲಿ ಬ್ಯಾಂಕ್‌ ಸಿಬ್ಬಂದಿ ಮೇಲೆ ಇಬ್ಬರು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಶೂಟೌಟ್ ಮಾಡಿ 93 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದರು. ಘಟನೆಯಲ್ಲಿ ವೆಂಕಟೇಶ್ ಮತ್ತು ಶಿವ ಕಾಶಿನಾಥ್ ಎಂಬುವವರು ಮೃತಪಟ್ಟಿದ್ದಾರೆ. ಇಬ್ಬರು ಸಿಎಂಎಸ್ ಏಜೆನ್ಸಿಯ ಸಿಬ್ಬಂದಿಗಳಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿವಾಜಿ ಚೌಕ್‌ನಲ್ಲಿರುವ ಎಟಿಎಂಗೆ ಸಿಬ್ಬಂದಿ ಬೆಳಗ್ಗೆ 11:30ಕ್ಕೆ ಹಣ ತುಂಬಲು ಬಂದಿದ್ದಾಗ, ಘಟನೆ ನಡೆದಿದೆ. ದುಷ್ಕರ್ಮಿಗಳು ಒಟ್ಟು 8 ಸುತ್ತು ಗುಂಡು ಹಾರಿಸಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT