ದೂತಾವಾಸ ಕಚೇರಿ ಉದ್ಘಾಟನೆ ಕಾರ್ಯಕ್ರಮ(ಫೋಟೋ ಕೃಪೆ-ಡಿ ಕೆ ಶಿವಕುಮಾರ್ ಸೋಷಿಯಲ್ ಮೀಡಿಯಾ ಪೋಸ್ಟ್  
ರಾಜ್ಯ

ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭ: ಶೀಘ್ರದಲ್ಲೇ ವೀಸಾ ಸೇವೆ ಆರಂಭ

ಕರ್ನಾಟಕದ ಜನರು ಅಮೆರಿಕಾ ವೀಸಾಕ್ಕಾಗಿ ಇಲ್ಲಿಯವರೆಗೆ ದೆಹಲಿ, ಚೆನ್ನೈ, ಹೈದರಾಬಾದ್​​ ಮತ್ತು ಮುಂಬೈಗೆ ಹೋಗಬೇಕಿತ್ತು. ಇನ್ನು ಮುಂದೆ ಬೆಂಗಳೂರಿನಲ್ಲೇ ವೀಸಾ ಪಡೆಯಬಹುದಾಗಿದೆ. ಆದರೆ, ವೀಸಾ ಸೇವೆ ಇನ್ನೂ ತಡವಾಗಲಿದೆ.

ಬೆಂಗಳೂರು: ಕರ್ನಾಟಕ ಜನತೆ ಇನ್ನು ಮುಂದೆ ಅಮೆರಿಕಾ ವೀಸಕ್ಕಾಗಿ ಬೇರೆ ರಾಜ್ಯಗಳಿಗೆ ಹೋಗಬೇಕಾಗಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕಾ ದೂತಾವಾಸ ಕಚೇರಿ ಶುಕ್ರವಾರ ಉದ್ಘಾಟನೆಯಾಗಿದೆ. ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕರ್ನಾಟಕದ ಜನರು ಅಮೆರಿಕಾ ವೀಸಾಕ್ಕಾಗಿ ಇಲ್ಲಿಯವರೆಗೆ ದೆಹಲಿ, ಚೆನ್ನೈ, ಹೈದರಾಬಾದ್​​ ಮತ್ತು ಮುಂಬೈಗೆ ಹೋಗಬೇಕಿತ್ತು. ಇನ್ನು ಮುಂದೆ ಬೆಂಗಳೂರಿನಲ್ಲೇ ವೀಸಾ ಪಡೆಯಬಹುದಾಗಿದೆ. ಆದರೆ, ವೀಸಾ ಸೇವೆ ಇನ್ನೂ ತಡವಾಗಲಿದೆ.

ಶೀಘ್ರದಲ್ಲೇ ವೀಸಾ ಸೇವೆ ಆರಂಭ: ಜೈಶಂಕರ್​

ಈಗಾಗಲೇ 12 ದೂತಾವಾಸ ಕಚೇರಿ ಬೆಂಗಳೂರಲ್ಲಿವೆ. ಇನ್ನಷ್ಟು ದೇಶಗಳು ಇಲ್ಲಿ ದೂತವಾಸ ಕಚೇರಿ ತೆರೆಯಬೇಕೆಂದು ನಮ್ಮ ಬಯಕೆ ಇದೆ. ಅಮೆರಿಕ ಮತ್ತು ಭಾರತದ ಬಾಂಧವ್ಯ ವೃದ್ಧಿಗೆ ನಿರಂತರ ಪ್ರಯತ್ನ ನಡೆಯುತ್ತಿದೆ. ಬೆಂಗಳೂರಿಗೆ ಸಾಕಷ್ಟು ಸಾಮರ್ಥ್ಯ ಇದ್ದು ಅದರ ಬಳಕೆಯಾಗಬೇಕು. ಬೆಂಗಳೂರಿನಲ್ಲಿ 1 ವರ್ಷದಲ್ಲಿ 8.80 ಲಕ್ಷ ಪಾಸ್ ಪೋರ್ಟ್ ವಿತರಣೆಯಾಗಿದೆ. ಅಂದರೆ 10 ವರ್ಷ ಅವಧಿಯಲ್ಲಿ ಎಷ್ಟು ಪಾಸ್ ಪೋರ್ಟ್ ವಿತರಣೆಯಾಗಿರಬಹುದು, ಅದರ ಮಹತ್ವ ಅರಿಯಬೇಕು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದರು.

ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿದ್ದೇನೆ. ಅಲ್ಲಿನ ಹೊಸ ಸರ್ಕಾರದ ಜೊತೆ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ನೀಡುವ ಪ್ರಕ್ರಿಯೆ ಆರಂಭಿಸುವ ಕುರಿತಾಗಿ ಚರ್ಚಿಸಲಿದ್ದೇನೆ. ಶೀಘ್ರದಲ್ಲೇ ಬೆಂಗಳೂರಿನ ದೂತಾವಾಸ ಕಚೇರಿಯಲ್ಲಿ ವೀಸಾ ಸೇವೆ ಆರಂಭವಾಗಲಿದೆ ಎಂದು ಭರವಸೆ ನೀಡಿದರು.

ಹೊರ ದೇಶದಲ್ಲಿ 35 ಲಕ್ಷ ಭಾರತೀಯ ವಿದ್ಯಾರ್ಥಿಗಳು ಅಧ್ಯಯನ‌ ಮಾಡುತ್ತಿದ್ದಾರೆ. 50 ಲಕ್ಷ ಭಾರತೀಯ ಕುಟುಂಬಗಳಿವೆ. ಈ ದೂತವಾಸದಿಂದ ಅವರಿಗೆ ವೀಸಾ ಸೇವೆ ಹೆಚ್ಚಿನ‌ ಅನುಕೂಲವಾಗಲಿದೆ. ಈಗ ಬೆಂಗಳೂನಿಂದ ಸ್ಯಾನ್ ಫ್ರಾನ್ಸ್‌ಸಿಸ್ಕೋಗೆ ವಾರದಲ್ಲಿ ಮೂರು ದಿನ ವಿಮಾನ ಸಂಚರಿಸುತ್ತಿದೆ. ಇದರಿಂದ ಅಧ್ಯಯನ, ಶಿಕ್ಷಣ, ತಂತ್ರಜ್ಞಾನ, ರಕ್ಷಣಾ ಕ್ಷೇತ್ರದಲ್ಲಿ ಅಮೆರಿಕಾ-ಬೆಂಗಳೂರಿನ ಸಂಬಂಧ ವೃದ್ಧಿಸಲು ಅನುಕೂಲವಾಗಲಿದೆ ಎಂದರು.

ಉದ್ಯಮಿಗಳಿಗೆ ಅನುಕೂಲ: ಡಿಕೆ ಶಿವಕುಮಾರ್​

ಅಮೆರಿಕ ಕಾನ್ಸುಲೆಟ್​ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು. ಅಲ್ಲಿಂದ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಅನುಷ್ಠಾನವಾಗುತ್ತಿದೆ, ಖುಷಿಯ ವಿಚಾರ. ಬೆಂಗಳೂರು ಜಾಗತಿಕವಾಗಿ ಬೆಳೆದಿದೆ. ಯೋಜನಾ ಬದ್ಧವಾದ ನಗರ ಅಲ್ಲದ ಕಾರಣ ಒಂದಷ್ಟು ಸಮಸ್ಯೆ ಇರಬಹುದು, ಅದನ್ನು ಪರಿಹರಿಸಲು ಪ್ರಯತ್ನ ನಡೆಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

SCROLL FOR NEXT