ಠಾಣೆ ಮುಂದೆ ಜಮಾಯಿಸಿರುವ ಜನರು. 
ರಾಜ್ಯ

ಚಾಮರಾಜಪೇಟೆ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: 40 ಮಂದಿ ವಿರುದ್ಧ FIR ದಾಖಲು

ಎಫ್‌ಐಆರ್‌ನಲ್ಲಿ ಟಿಪ್ಪುನಗರ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್, ಶಬ್ಬೀರ್, ಮಸೂದ್, ಸಿದ್ದಿಕ್ ಮತ್ತು ಇತರೆ 40 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಬೆಂಗಳೂರು: ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಹಿಳೆಯರು ಸೇರಿದಂತೆ 40ಕ್ಕೂ ಹೆಚ್ಚು ಮಂದಿ ವಿರುದ್ಧ ಚಾಮರಾಜಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಟಿಪ್ಪುನಗರ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್, ಶಬ್ಬೀರ್, ಮಸೂದ್, ಸಿದ್ದಿಕ್ ಮತ್ತು ಇತರೆ 40 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

ಜನವರಿ 14 ರಂದು ಐದು ಯುವಕರ ಗುಂಪೊಂದು 21 ವರ್ಷದ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ, ವಾಹನವನ್ನು ಹಾನಿಗೊಳಿಸಿತ್ತು. ಈ ಸಂಬಂಧ ನಯಮತ್ ಪಾಷಾ ಎಂಬುವವರು ದೂರು ದಾಖಲಿಸಿದ್ದರು. ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಸಬ್ ಇನ್‌ಸ್ಪೆಕ್ಟರ್ ತನಿಖೆ ನಡೆಸಿ, ಪಾಷಾ ಅವರನ್ನು ಟಿಪ್ಪುನಗರದ ಮಸೀದಿ ಬಳಿ ಕರೆದೊಯ್ದು ಪರಿಶೀಲನೆ ನಡೆಸಿದ್ದರು.

ಈ ವಿಚಾರ ತಿಳಿದ ಆರೋಪಿಗಳಾದ ಚಂದನ್, ಸಲೀಂ, ಮಸೂದ್, ಶಬ್ಬೀರ್ ಮಹಿಳೆಯರು ಸೇರಿದಂತೆ 40 ಮಂದಿಯನ್ನು ಠಾಣೆ ಮುಂದೆ ಜಮಾಯಿಸುವಂತೆ ಮಾಡಿ, ಪ್ರತಿಭಟೆ ನಡೆಸಿದರು.

ನಯಾಮತ್ ಅವರನ್ನು ಏಕೆ ಬಂಧಿಸಿಲ್ಲ? ಏಕೆ ಬಿಟ್ಟು ಕಳುಹಿಸಿದ್ದೀರಾ’ ಎಂದು ಗಲಾಟೆ ಮಾಡಿದರು. ಪೊಲೀಸರಿಗೆ ಏರುದನಿಯಲ್ಲಿ ಪ್ರಶ್ನಿಸಿದರು. ಎಷ್ಟೇ ಸಮಾಧಾನ ಮಾಡಿದರೂ ಕೇಳದೇ, ಪೊಲೀಸ್ ಸಿಬ್ಬಂದಿಗಳನ್ನು ತಳ್ಳಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT