ಶಿವಲಿಂಗಕ್ಕೆ ಪೂಜೆ ಸಲ್ಲಿಸುತ್ತಿರುವ ಡಿಕೆ.ಶಿವಕುಮಾರ್. 
ರಾಜ್ಯ

ಕಪಿಲೇಶ್ವರ ದೇಗುಲದಲ್ಲಿ ಡಿಕೆಶಿ ವಿಶೇಷ ಪೂಜೆ: ಬೆಳಗಾವಿಯಲ್ಲೇ ಇದ್ದರೂ ನಾಯಕನ ಭೇಟಿಯಾಗದ ಜಾರಕಿಹೊಳಿ

ಕಾಮಗಾರಿಗಳ ಉದ್ಘಾಟನೆ ನೆಪ ಹೇಳಿಕೊಂಡು ಸತೀಶ್ ಅವರು ಡಿ.ಕೆ ಶಿವಕುಮಾರ್ ಅವರ ಭೇಟಿಯನ್ನು ನಿಯಂತ್ರಿಸುತ್ತಿದ್ದು, ಈ ಮೂಲಕ ಮುನಿಸು ಹೊರಹಾಕುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬೆಳಗಾಳಿಯಲ್ಲೇ ವಾಸ್ತವ್ಯ ಹೂಡಿದ್ದರೂ ಸಚಿವ ಸತೀಶ್ ಜಾರಕಿಹೊಳಿಯವರು ಭೇಟಿ ಮಾಡದಿರುವುದು ಹಲವರ ಹುಬ್ಬೇರುವಂತೆ ಮಾಡಿದೆ.

ಕಾಮಗಾರಿಗಳ ಉದ್ಘಾಟನೆ ನೆಪ ಹೇಳಿಕೊಂಡು ಸತೀಶ್ ಅವರು ಡಿ.ಕೆ ಶಿವಕುಮಾರ್ ಅವರ ಭೇಟಿಯನ್ನು ನಿಯಂತ್ರಿಸುತ್ತಿದ್ದು, ಈ ಮೂಲಕ ಮುನಿಸು ಹೊರಹಾಕುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

ಈ ನಡುವೆ ಸತೀಶ್ ಜಾರಕಿಹೊಳಿ ಆಪ್ತ ವಲಯದಲ್ಲಿ ಕಾಣಿಸಿಕೊಂಡ ಶಾಸಕರು ದುಬೈ ಪ್ರವಾಸಕ್ಕೆ ಯೋಜನೆ ರೂಪಿಸಿದ್ದು, 4-5 ದಿನಗಳ ಕಾಲ ವಿದೇಶಕ್ಕೆ ಹಾರಲು ಸಜ್ಜಾಗಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಡಿಕೆ ಶಿವಕುಮಾರ್ ಅವರು, ಭಾನುವಾರ ಸತೀಶ್ ಆಪ್ತ ಆಸೀಫ್ ಸೇಠ್ ನಿವಾಸಕ್ಕೆ ಭೇಟಿ ಕೊಟ್ಟಿದ್ದು, ಯಾರೆಲ್ಲಾ ಪ್ರವಾಸಕ್ಕೆ ಹೋಗುತ್ತಿದ್ದಾರೆಂಬುದರ ಕುರಿತು ಪ್ರಶ್ನೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸೇಠ್, ಯೋಜನೆ ರೂಪಿಸಲಾಗಿದೆ. ನಿಮಗೆ ಹೇಳದೇ ಹೋಗಲ್ಲ ಎಂದು ಉತ್ತರಿಸಿದ್ದಾರೆ. ಬಳಿಕ ಡಿಕೆ ಶಿವಕುಮಾರ್ ಅವರು, ಪಕ್ಷದಲ್ಲಿದ್ದಾಗ ಶಿಸ್ತಿನಿಂದ ಇರುವಂತೆ ಪಾಠ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.

ಇನ್ನು ಬೆಳಗಾವಿಗೆ ಭೇಟಿ ನೀಡಿರುವ ಡಿಕೆ.ಶಿವಕುಮಾರ್, ಭಾನುವಾರ ತಾವು ವಾಸ್ತವ್ಯ ಹೂಡಿದ್ದ ಸರ್ಕಾರಿ ಪ್ರವಾಸಿ ಮಂದಿರದಿಂದ ನೇರವಾಗಿ ಶಹಾಪುರದ ಕಪಿಲೇಶ್ವರ ದೇವಸ್ಥಾನಕ್ಕೆ ತೆರಳಿ, ವಿವಿಧ ಧಾರ್ಮಿಕ ವಿಧಿವಿಧಾನ ಕೈಗೊಂಡರು. 101 ಲೀಟರ್ ಹಾಲು ಬಳಸಿ, ಶಿವಲಿಂಗಕ್ಕೆ ಅಭಿಷೇಕ ಮಾಡಿದರು.

ಬಳಿಕ ಮಾತನಾಡಿದ ಅವರು, ನಾನೊಬ್ಬ ದೈವ ಭಕ್ತ. ಪೂಜೆ ಮಾಡಿ, ದೈವಶಕ್ತಿ ನೆನಪಿಸಿಕೊಂಡೇ ಮನೆಯಿಂದ ಹೊರ ಬರುತ್ತೇ‌ನೆ. ಹಾಗಾಗಿ ದೇವಸ್ಥಾನಕ್ಕೆ ಬಂದಿದ್ದೇನೆ. ನಿಮ್ಮಿಂದ ರಕ್ಷಣೆ ಬೇಕಪ್ಪ' ಎಂದು ಹೇಳುವ ಮೂಲಕ, ಪರೋಕ್ಷವಾಗಿ ಬೆಳಗಾವಿ ನಾಯಕರಿಂದ ರಕ್ಷಣೆ ಬೇಕು ಎಂದು ಹೇಳಿದರು.

ಮಹಾ ಕುಂಭಮೇಳ ಕುರಿತು ಮಾತನಾಡಿ, ನಾನು ಕೂಡ ಈ ಬಾರಿ ಕುಂಭಮೇಳಕ್ಕೆ ಹೋಗುತ್ತಿದ್ದೇನೆ. ಉತ್ತರಪ್ರದೇಶ ಸರ್ಕಾರದ ಹಿರಿಯ ಸಚಿವರು ನನಗೆ ಆಹ್ವಾನಿಸಿದ್ದಾರೆ‌. ಯಾವುದೇ ಧರ್ಮದವರು ಆಗಲಿ, ಎಲ್ಲರಿಗೂ ಒಂದೊಂದು ನಂಬಿಕೆ ಇರುತ್ತದೆ. ನಾನು ನನ್ನ ಕುಟುಂಬದೊಂದಿಗೆ ಕುಂಭಮೇಳಕ್ಕೆ ಭೇಟಿ ನೀಡಲಿದ್ದೇನೆ. ಆದರೆ, ಭೇಟಿಯ ನಿಖರವಾದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT