ಆರ್ ಅಶೋಕ 
ರಾಜ್ಯ

ಗೋವಿನ ಮೇಲೆ ದಾಳಿ: ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲೊಡ್ಡುತ್ತಿವೆ; ಆರ್ ಅಶೋಕ ಪ್ರತಿಭಟನೆ ಎಚ್ಚರಿಕೆ

ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಬೆಂಗಳೂರಿನಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿತ್ತು.

ಬೆಂಗಳೂರು: ರಾಜ್ಯದಲ್ಲಿ ಹಿಂದೂ ಭಾವನೆಗಳನ್ನು ಕೆರಳಿಸಲು ಮತ್ತು ಘಾಸಿಗೊಳಿಸುವ ಉದ್ದೇಶದಿಂದ ಮತಾಂಧ ಶಕ್ತಿಗಳು ಗೋವುಗಳ ಮೇಲೆ ದಾಳಿ ನಡೆಸುತ್ತಿವೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ.

ಕರ್ನಾಟಕ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಈ ಹೇಯ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಹೇಳಿದ್ದಾರೆ.

ಚಾಮರಾಜಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ವೇಳೆ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ಆಘಾತಕಾರಿ ಅಮಾನವೀಯ ಘಟನೆ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ಕಾರವಾರದ ಹೊನ್ನಾವರ ತಾಲ್ಲೂಕಿನ ಸಾಲಕೋಡ ಗ್ರಾಮದಲ್ಲಿ ದುಷ್ಕರ್ಮಿಗಳು ಮತ್ತೊಮ್ಮೆ ಗರ್ಭಿಣಿ ಹಸುವನ್ನು ಕೊಂದಿದ್ದು, ಕರುವನ್ನು ಹೊರತೆಗೆದು ಬಿಸಾಡಿ, ಮಾಂಸವನ್ನು ಕೊಂಡೊಯ್ದಿರುವ ಘಟನೆ ವರದಿಯಾಗಿದೆ. ಗರ್ಭಿಣಿ ಹಸು ಮೇಯಲು ಹೋಗಿದ್ದಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

'ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಗೋವುಗಳ ಮೇಲೆ ಪದೇ ಪದೆ ನಡೆಯುತ್ತಿರುವ ದಾಳಿಗಳು ದೊಡ್ಡ ಪಿತೂರಿಯನ್ನು ಸೂಚಿಸುತ್ತಿವೆ. ಇದು ಮತಾಂಧ ಮತ್ತು ಮೂಲಭೂತವಾದಿ ಶಕ್ತಿಗಳನ್ನು ಒಳಗೊಂಡಿರುವ ಪ್ರಮುಖ ಜಿಹಾದಿ ಸಂಚು ಎಂದು ತೋರುತ್ತದೆ' ಎಂದು ಅಶೋಕ ಒತ್ತಿಹೇಳಿದರು.

ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಬೆಂಗಳೂರಿನಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿತ್ತು.

ಎಐಸಿಸಿ ಅಧ್ಯಕ್ಷರಾಗಿ ಮಹಾತ್ಮ ಗಾಂಧಿ ಅಧಿಕಾರ ಸ್ವೀಕರಿಸಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿ ಶತಮಾನೋತ್ಸವ ಆಚರಣೆಯನ್ನು ಆಯೋಜಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ, ಮಹಾತ್ಮ ಗಾಂಧಿಯವರ ಆದರ್ಶಗಳನ್ನು ಪಾಲಿಸುವುದೆಂದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಲೂಟಿ ಮಾಡುವುದೇ? ಇದರ ಅರ್ಥ ಹಿಂದುಳಿದವರ ಕಲ್ಯಾಣ ಮಾಡುವುದಕ್ಕಾಗಿಯೇ? ಅಥವಾ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ರಹಿತರಿಗೆ ವಸತಿ ಗೃಹ ನಿರ್ಮಿಸಲು ಉದ್ದೇಶಿಸಲಾಗಿದೆಯೇ? ಎಂದು ಪ್ರಶ್ನಿಸಿದರು.

'ಗಾಂಧಿಯವರ ತತ್ತ್ವಗಳನ್ನು ಅಳವಡಿಸಿಕೊಳ್ಳುವುದು ಎಂದರೆ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗುವ ದೇಶವಿರೋಧಿ ಅಂಶಗಳನ್ನು ಸಮರ್ಥಿಸಲು ಗಾಂಧಿ ಪಡೆದುಕೊಂಡ ಸ್ವಾತಂತ್ರ್ಯವನ್ನು ಬಳಸುವುದೇ? ಅಥವಾ ಪವಿತ್ರವಾದ ಗೋವನ್ನು ಕೊಂದಾಗ ಮೌನವಾಗಿರುವುದು ಇದರ ಅರ್ಥವೇ? ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT