ರಾಜ್ಯ

ಮೈಸೂರು: ಕೇರಳ ಉದ್ಯಮಿ ಮೇಲೆ ಹಲ್ಲೆ; ಕಾರು, ನಗದು ದೋಚಿ ಪರಾರಿ

ಹಗಲು ಹೊತ್ತಿನಲ್ಲಿ ಜನನಿಬಿಡ ರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಕೆಲವು ದಾರಿಹೋಕರು ತೆಗೆದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೇರಳ ಉದ್ಯಮಿಯ ಮೇಲೆ ನಾಲ್ವರು ದರೋಡೆಕೋರರ ತಂಡವೊಂದು ಹಲ್ಲೆ ನಡೆಸಿ, ಅವರ ಕಾರು ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹಗಲು ಹೊತ್ತಿನಲ್ಲಿ ಜನನಿಬಿಡ ರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಕೆಲವು ದಾರಿಹೋಕರು ತೆಗೆದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ ಮತ್ತು ರಾಜ್ಯದಲ್ಲಿ ತೀವ್ರ ಕಳವಳ ಮೂಡಿಸಿದೆ.

ಪೊಲೀಸರ ಪ್ರಕಾರ, ಸೋಮವಾರ ಮೈಸೂರು ಜಿಲ್ಲೆಯ ಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ನಾಲ್ವರು ಮುಸುಕುಧಾರಿಗಳ ತಂಡ, ಕೇರಳದ ಉದ್ಯಮಿ ಸೂಫಿ ಅವರಿದ್ದ ಫೋರ್ಡ್ ಇಕೊ ಸ್ಪೋರ್ಟ್ ಕಾರನ್ನು ಅಡ್ಡಗಟ್ಟಿದೆ. ದರೋಡೆಕೋರರು ಉದ್ಯಮಿ ಮತ್ತು ಚಾಲಕನನ್ನು ವಾಹನದಿಂದ ಹೊರಗೆಳೆದು, ಬೆದರಿಸಿ ತಳ್ಳಿದ್ದಾರೆ. ನಂತರ ಅವರ ಬಳಿ 1.5 ಲಕ್ಷ ರೂಪಾಯಿ ನಗದು ಹಣವಿದ್ದ ಬ್ಯಾಗನ್ನು ಕಿತ್ತುಕೊಂಡು ಕಾರಿನೊಂದಿಗೆ ಪರಾರಿಯಾಗಿದ್ದಾರೆ.

ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಸೂಫಿ ಅವರು ಘಟನೆಯ ನಂತರ ಪೊಲೀಸರನ್ನು ಸಂಪರ್ಕಿಸಿದ್ದು, ಜಯಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇರಳಕ್ಕೆ ಹೋಗುವ ಮಾರ್ಗದಲ್ಲಿರುವ ಎಲ್ಲಾ ಚೆಕ್ ಪೋಸ್ಟ್‌ಗಳಿಗೆ ಪೊಲೀಸರು ಮಾಹಿತಿ ನೀಡಿದ್ದು, ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ.

ಬೀದರ್ ಮತ್ತು ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ಮತ್ತು ಎಟಿಎಂ ವಾಹನದ ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕೆ ಹತ್ಯೆ ಮಾಡಿದ ಪ್ರಕರಣಗಳ ಬೆನ್ನಲ್ಲೇ ಮತ್ತೊಂದು ದರೋಡೆ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT