ಉಲ್ಲಾಳ ಬ್ಯಾಂಕ್ ದರೋಡೆ 
ರಾಜ್ಯ

ಮಂಗಳೂರು ಬ್ಯಾಂಕ್​​ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಧಿತರು ಆರೋಪಿಗಳನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ.

ಮಂಗಳೂರು: ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.

ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಇಂದು ಮಧುರೈ ಸಮೀಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರು ಆರೋಪಿಗಳನ್ನು ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಎಂದು ಗುರುತಿಸಲಾಗಿದೆ.

ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ ಹಾಗೂ ಮಣಿವಣ್ಣನ್ ಬಂಧಿತ ಪ್ರಮುಖ ಆರೋಪಿಗಳಾಗಿದ್ದು, ಇತರ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಅವರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 2 ಗೋಣಿಚೀಲದಲ್ಲಿದ್ದ ನಗದು, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಅನುಪಮ್ ಅಗರ್ವಾಲ್‌ ಅವರು ಮಾಹಿತಿ ನೀಡಿದ್ದಾರೆ.

ಜನವರಿ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೆ.ಸಿ.ರೋಡಿನಲ್ಲಿರುವ ಸಹಕಾರಿ ಬ್ಯಾಂಕ್ ಗೆ ಹಾಡಹಗಲೇ ನುಗ್ಗಿದ ಖದೀಮರ ಗುಂಪು ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದರು.

ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್​​ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್