ಈಶ್ವರ್ ಖಂಡ್ರೆ 
ರಾಜ್ಯ

ಕಾಂತಾರ ಧಗಧಗ: ಚಿತ್ರೀಕರಣ ವೇಳೆ ಅರಣ್ಯಾಧಿಕಾರಗಳ ದಿಢೀರ್ ಭೇಟಿ; ಈಶ್ವರ್ ಖಂಡ್ರೆ ವಾರ್ನಿಂಗ್ ಏನು?

ಹೆರೂರು ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿನ ಗೋಮಾಳ ಜಾಗದಲ್ಲಿ ಶೂಟಿಂಗ್‌ ಮಾಡಲು ಕಾಂತಾರ ಚಿತ್ರತಂಡ, ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿತ್ತು.

ಕಾಂತಾರ ಚಿತ್ರ ಕನ್ನಡದ ಮೇರುಗನ್ನು ಮತ್ತಷ್ಟು ಹೆಚ್ಚಿಸಿತ್ತು. ಅಲ್ಲದೆ ಕಾಂತಾರ ಚಿತ್ರದಲ್ಲಿನ ಅಭಿನಯಕ್ಕಾಗಿ ರಿಷಬ್ ಶೆಟ್ಟಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು. ಇದೀಗ ಕಾಂತಾರ ಚಿತ್ರದ ಫ್ರಿಕ್ವೆಲ್ ನಿರ್ಮಾಣವಾಗುತ್ತಿದೆ. ಇದಕ್ಕಾಗಿ ರಿಷಬ್ ಶೆಟ್ಟಿ ಅರಣ್ಯ ಪ್ರದೇಶದಲ್ಲಿ ಭರ್ಜರಿ ಸೆಟ್ ಹಾಕಿ ಚಿತ್ರೀಕರಣ ನಡೆಸುತ್ತಿದ್ದಾರೆ.

ಆದರೆ ಕಾಂತಾರ ಚಿತ್ರಕ್ಕೆ ಈಗ ಶಾಕ್ ಎದುರಾಗಿದೆ. ಹೌದು ಕಾಂತಾರ ಚಿತ್ರದ ಸೆಟ್ ಗೆ ಅರಣ್ಯ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆರೂರು ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿನ ಗೋಮಾಳ ಜಾಗದಲ್ಲಿ ಶೂಟಿಂಗ್‌ ಮಾಡಲು ಕಾಂತಾರ ಚಿತ್ರತಂಡ, ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಂಡಿತ್ತು. ಅದರಂತೆ ಚಿತ್ರೀಕರಣ ನಡೆಸುತ್ತದ್ದು ಈ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿತ್ತು.

ಹೀಗಾಗಿ ಇಂದು ಅಧಿಕಾರಿಗಳು ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಮತ್ತೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಕಾಡಿಗೆ ಯಾವುದೇ ಹಾನಿ ಆದರೆ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂತಾರ-2 ಚಿತ್ರೀಕರಣಕ್ಕೆ ವಿವಾದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ ಎಂದು ಸಚಿವರು ತಿಳಿಸಿದ್ದಾರೆ. ಸಿನಿಮಾ ಚಿತ್ರೀಕರಣಕ್ಕೆ ನಿಯಮಾವಳಿ ಪ್ರಕಾರ ಅನುಮತಿ ನೀಡಲಾಗಿದೆ. ನಮ್ಮ ಅರಣ್ಯ ಭೂಮಿಯಲ್ಲಿ ಚಿತ್ರೀಕರಣ ಮಾಡಿಲ್ಲ, ಕಂದಾಯ ಜಮೀನಿನಲ್ಲಿ ಮಾಡಿದ್ದಾರೆ. ಕಾಂತಾರ-2 ಚಿತ್ರತಂಡ ಷರತ್ತುಗಳನ್ನು ಉಲ್ಲಂಘಿಸಿದ್ರೆ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ನಿರ್ದೇಶಕರಿಗೆ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT