ಕಾಂತರ ಚಾಪ್ಟರ್ -1ರಲ್ಲಿ ರಿಷಭ್ ಶೆಟ್ಟಿ 
ರಾಜ್ಯ

ಅರಣ್ಯ ನಿಯಮ ಉಲ್ಲಂಘನೆ: ಕಾಂತಾರ ಚಾಪ್ಟರ್-1 ನಿರ್ಮಾಪಕರಿಗೆ 50,000 ರೂ ದಂಡ!

ರಿಷಭ್ ಶೆಟ್ಟಿ ನಿರ್ದೇಶನದ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಸ್ಫೋಟಿಸಿ, ಮರಗಳನ್ನು ಕಡಿದಿರುವ ಆರೋಪ ಕೂಡಾ ಚಿತ್ರತಂಡದ ಮೇಲಿದೆ.

ಬೆಂಗಳೂರು/ಹಾಸನ: 2022ರ ಬ್ಲಾಕ್ ಬಸ್ಟರ್ ಕಾಂತಾರ ಪ್ರೀಕ್ವೆಲ್ ಕಾಂತಾರ ಚಾಪ್ಟರ್ -1 ಕನ್ನಡ ಸಿನಿಮಾದ ಚಿತ್ರೀಕರಣದ ವೇಳೆ ಸಕಲೇಶಪುರ ಅರಣ್ಯದಲ್ಲಿ ಅಕ್ರಮವಾಗಿ ಶೂಟಿಂಗ್ ಸೆಟ್ ವಸ್ತುಗಳನ್ನು ಸುರಿದಿದ್ದಕ್ಕಾಗಿ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಗೆ ಅರಣ್ಯ ಇಲಾಖೆ ಅಧಿಕಾರಿಗಳು ರೂ. 50,000 ದಂಡ ವಿಧಿಸಿದ್ದಾರೆ.

ರಿಷಭ್ ಶೆಟ್ಟಿ ನಿರ್ದೇಶನದ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಸ್ಫೋಟಿಸಿ, ಮರಗಳನ್ನು ಕಡಿದಿರುವ ಆರೋಪ ಕೂಡಾ ಚಿತ್ರತಂಡದ ಮೇಲಿದೆ. ಸಕಲೇಶಪುರ ಅರಣ್ಯದ ಸರ್ವೇ ಸಂಖ್ಯೆ 131 ರ ಡೀಮ್ಡ್ ಫಾರೆಸ್ಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಹಾಸನ ಅರಣ್ಯ ಸಂರಕ್ಷಣಾಧಿಕಾರಿ ವಿ ಯೆಡುಕೊಂಡಲನ್ , ಚಿತ್ರ ತಂಡ ಷರತ್ತು ಪಡೆಯುವ ಮುನ್ನ ಅರಣ್ಯದ ಒಳಗಡೆ ಸಾಮಾಗ್ರಿಗಳನ್ನು ಸುರಿದಿದ್ದರು. ಇದು ಅತಿಕ್ರಮಣಕ್ಕೆ ಸಮಾನವಾಗಿದ್ದು, ಕರ್ನಾಟಕ ಅರಣ್ಯ ಕಾಯ್ದೆಯಡಿ ಅವರಿಗೆ 50,000 ರೂ. ದಂಡ ವಿಧಿಸಲಾಗಿದೆ. ಕೆಲವು ದಿನಗಳ ನಂತರ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ.

ಹಾಸನ ಡಿಸಿಎಫ್ ಸೌರಭ್ ಕುಮಾರ್ ಮಾತನಾಡಿ, ಜನವರಿ 1 ರಂದು ಅನುಮತಿಗಾಗಿ ಯೂನಿಟ್ ಅರ್ಜಿ ಸಲ್ಲಿಸಿತು. ಆದರೆ ಇಲಾಖೆಯನ್ನು ಸಂಪರ್ಕಿಸುವ ಮೊದಲೇ ಅವರು ಕಾಡಿನೊಳಗೆ ವಸ್ತುಗಳನ್ನು ಸುರಿದಿದ್ದರು. ಜನವರಿ 3 ರಂದು ಸ್ಥಳವನ್ನು ಪರಿಶೀಲಿಸಲಾಯಿತು. ಜನವರಿ 4 ರಂದು ಎಫ್‌ಐಆರ್ ದಾಖಲಿಸಲಾಯಿತು. ಈ ಕುರಿತು ವಿವರವಾದ ತನಿಖೆ ನಡೆಸಲಾಗುತ್ತಿದೆ ಮತ್ತು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು, ಬಳಿಕ ಚಿತ್ರೀಕರಣ ಕುರಿತು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಜನವರಿ 7 ರಿಂದ 25 ರವರೆಗೆ ಚಲನಚಿತ್ರ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಅವರು ಅರಣ್ಯ ಮತ್ತು ಪಕ್ಕದ ಗೋಮಾಳ ಭೂಮಿಯನ್ನು ಬಳಸುತ್ತಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಹೆಚ್ಚಿನ ಹೊಗೆಯನ್ನು ಉಂಟುಮಾಡಲು ಸ್ಫೋಟಕಗಳನ್ನು ಸಿಡಿಸಲಾಗಿದೆ ಎಂಬುದು ತಿಳಿದುಬಂದಿದೆ. ಮರದ ಬುಡಗಳನ್ನು ರಚಿಸಲು ಕೃತಕ ವಸ್ತುಗಳನ್ನು ಸಹ ಬಳಸಲಾಗಿದೆ. ಚಿತ್ರೀಕರಣಕ್ಕೆ ಅನುಮತಿಸಲಾದ ಭೂಮಿ ಬಂಜರು ಭೂಮಿಯಾಗಿತ್ತು.

ಅಗ್ನಿಶಾಮಕ ಮತ್ತು ತುರ್ತು ಮತ್ತು ಪೊಲೀಸ್ ಇಲಾಖೆಗಳಿಂದ ವರದಿಗಳನ್ನು ಸಹ ತೆಗೆದುಕೊಳ್ಳಲಾಗಿದೆ. ವಿವರವಾದ ತನಿಖೆ ನಡೆಸಲಾಗುತ್ತಿದೆ ಮತ್ತು ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು.ತದನಂತರ ಚಿತ್ರೀಕರಣಕ್ಕೆ ಅವಕಾಶ ನೀಡಬೇಕೋ ಅಥವಾ ಬೇಡವೋ ಎಂಬುದರ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT