ನಮ್ಮ ಕ್ಲಿನಿಕ್ 
ರಾಜ್ಯ

ನಮ್ಮ ಕ್ಲಿನಿಕ್: ಉಚಿತ ವೈದ್ಯಕೀಯ ಸೇವೆಯಿದ್ದರೂ ಜನತೆ ಹಿಂದೇಟು, ಜಾಗೃತಿ ಮೂಡಿಸಲು BBMP ಮುಂದು..!

ನಗರದಲ್ಲಿ ಒಟ್ಟು 225 ಬಿಬಿಎಂಪಿ ವಾರ್ಡ್ ಗಳಿದ್ದು, ಪ್ರತಿ ವಾರ್ಡ್ ನಲ್ಲಿಯೂ ಒಂದೊಂದು ನಮ್ಮ ಕ್ಲಿನಿಕ್ ಗಳಿವೆ.

ಬೆಂಗಳೂರು: ನಗರದ ಜನತೆಗೆ ಉಚಿತ ವೈದ್ಯಕೀಯ ಸೇವೆ ನೀಡುವ ಉದ್ದೇಶದಿಂದ ನಗರದಲ್ಲಿ ನಮ್ಮ ಕ್ಲಿನಿಕ್ ಗಳನ್ನು ಆರಂಭ ಮಾಡಿದ್ದರೂ, ಸೌಲಭ್ಯ ಪಡೆಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜನರದಲ್ಲಿ ಜಾಗೃತಿ ಮೂಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ನಗರದಲ್ಲಿ ಒಟ್ಟು 225 ಬಿಬಿಎಂಪಿ ವಾರ್ಡ್ ಗಳಿದ್ದು, ಪ್ರತಿ ವಾರ್ಡ್ ನಲ್ಲಿಯೂ ಒಂದೊಂದು ನಮ್ಮ ಕ್ಲಿನಿಕ್ ಗಳಿವೆ. ನಮ್ಮ ಕ್ಲಿನಿಕ್ ಗಳ ವೈದ್ಯರು ಬಿಬಿಎಂಪಿ ಸಿಬ್ಬಂದಿಗಳೊಂದಿಗೆ ಆಯಾ ವಾರ್ಡ್ ಗಳಲ್ಲಿರುವ ಉದ್ಯಾನವನಗಳು, ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ, ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಎಂಪಿ ಆರೋಗ್ಯ ಮತ್ತು ಪಶು ಸಂಗೋಪನೆ ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಅವರು ಮಾತನಾಡಿ, ನಮ್ಮ ಕ್ಲಿನಿಕ್ ಗಳಿಗೆ ಪ್ರಸ್ತುತ 30-40 ಜನರು ಭೇಟಿ ನೀಡುತ್ತಿದ್ದಾರೆ. ಈ ಸಂಖ್ಯೆ ಹೆಚ್ಚಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ನಮ್ಮ ಕ್ಲಿನಿಕ್ ಗಳು ಆರಂಭವಾದಾಗ ವೈದ್ಯರು ಹಾಗೂ ಸಲಕರಣೆಗಳ ಕೊರತೆ ಬಗ್ಗೆ ದೂರುಗಳು ಕೇಳಿ ಬಂದಿದ್ದವು. ಈ ಸಮಸ್ಯೆಯನ್ನು ಪರಿಹರಿಸಲಾಗಿದೆ. ಇದೀಗ ವೈದ್ಯರ ಕೊರತೆ ಕೂಡ ಇಲ್ಲ ಎಂದು ತಿಳಿಸಿದರು.

ನಮ್ಮ ಕ್ಲಿನಿಕ್ ಗಳಿಗೆ ವೈದ್ಯರೇ ಪ್ರಮುಖವಾದವರು. ಇದೀಗ ಅವರೇ ನಮ್ಮ ಕ್ಲಿನಿಕ್ ಗಳ ಬಗಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸುತ್ತಿದ್ದಾರೆ. ರೋಗಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅವುಗಳನ್ನು ತಡೆಗಟ್ಟಲು ಕಿರುಚಿತ್ರಗಳನ್ನು ಪ್ರದರ್ಶಿಸುತ್ತಿದ್ದಾರೆ. ತಮ್ಮ ತಮ್ಮ ವಾರ್ಡ್ ಗಳಲ್ಲಿರುವ ಸಾರ್ವಜನಿಕ ಪ್ರದೇಶಗಳಿಗೆ ಭೇಟಿ ನೀಡಿ, ವಿವಿಧ ಕಾಯಿಲೆಗಳು ಮತ್ತು ಚಿಕಿತ್ಸೆಗಳ ಬಗ್ಗೆ ಜನರೊಂದಿಗೆ ಮಾತನಾಡುತ್ತಾರೆ. ಬೀದಿ ನಾಟಕಗಳನ್ನು ನಡೆಸುತ್ತಾರೆ. ಮೊಬೈಲ್ ವಾಹನಗಳು ಮೂಲಕ ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಸೇವೆಗಳ ಕುರಿತು ಮಾಹಿತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಡಿಸೆಂಬರ್ ನಲ್ಲಿ ಈ ಜಾಗೃತಿ ಅಭಿಯಾನ ಆರಂಭವಾಗಿದ್ದು, ಮಾರ್ಚ್ ವರೆಗೂ ಮುಂದುವರೆಯುತ್ತದೆ. ಜನರಿಗೆ ನಮ್ಮ ಕ್ಲಿನಿಕ್ ಬಗ್ಗೆ ತಿಳಿಯುವವರೆಗೂ ಈ ಅಭಿಯಾನ ಮುಂದುವರೆಸಲಾಗುವುದು ಎಂದರು .

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT