ಆರೋಪಿ ಕಾಲಿಗೆ ಗುಂಡೇಟು 
ರಾಜ್ಯ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು

ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು.

ಮಂಗಳೂರು: ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬನಿಗೆ ಮಂಗಳೂರು ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.

ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಲ್ಲಿ ಒಬ್ಬರಾದ ಮುಂಬೈನ ಚೆಂಬೂರಿನ ತಿಲಕ್ ನಗರದ ನಿವಾಸಿ ಕಣ್ಣನ್ ಮಣಿ (36) ಅವರನ್ನು ಬಂಧಿಸಿದ ನಂತರ ಮಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.

ಸಂಜೆ 4.20ರ ಸುಮಾರಿಗೆ ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಎಚ್‌ಎನ್ ಅವರ ಸಮ್ಮುಖದಲ್ಲಿ ತಂಡವು ಸ್ಥಳ ಪರಿಶೀಲನೆ ನಡೆಸಿದ್ದು, ಈ ವೇಳೆ ಆರೋಪಿ ಕಣ್ಣನ್ ಮಣಿ ಪರಾರಿಯಾಗಲು ಯತ್ನಿದ್ದಾರೆ.

ಸ್ಥಳದಲ್ಲಿ ಸಿಕ್ಕ ಒಡೆದ ಬಿಯರ್ ಬಾಟಲಿಯಿಂದ ಪೊಲೀಸರಾದ ಅಂಜನಪ್ಪ ಮತ್ತು ನಿತಿನ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ತನಿಖಾಧಿಕಾರಿಯನ್ನು ತಳ್ಳಿ ಒಡೆದ ಬಿಯರ್ ಬಾಟಲಿಯಿಂದ ಇರಿಯಲು ಯತ್ನಿಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಸಿಸಿಬಿ ಇನ್ಸ್‌ಪೆಕ್ಟರ್ ಎಚ್ಚರಿಕೆ ನೀಡಿದ್ದಾರೆ. ಆದರೂ ಬಗ್ಗದ ಆರೋಪಿ ಪೊಲೀಸರ ಮೇಲೆ ಹಲ್ಲೆ ಮುಂದುವರಿಸಿದ್ದಾನೆ.

ಹೀಗಾಗಿ ಆತ್ಮರಕ್ಷಣೆಗಾಗಿ ಸಿಸಿಬಿ ಇನ್ಸ್ ಪೆಕ್ಟರ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಬಾಲಕೃಷ್ಣ, ಅಂಜನಪ್ಪ, ನಿತಿನ್ ಎಂಬುವವರಿಗೆ ಗಾಯಗಳಾಗಿದ್ದು, ಗಾಯಗೊಂಡ ಪೊಲೀಸರು ಹಾಗೂ ಆರೋಪಿಗಳನ್ನು ಮಂಗಳೂರು ಸಮೀಪದ ದೇರಳಕಟ್ಟೆಯಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ.

ಜನವರಿ 17 ರಂದು ಮಧ್ಯಾಹ್ನ 1 ರಿಂದ 1.20 ರ ನಡುವೆ ದರೋಡೆ ನಡೆದಿತ್ತು. ಆರೋಪಿಗಳು ಬ್ಯಾಂಕ್ ನೌಕರರನ್ನು ಬೆದರಿಸಿ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

2029ಕ್ಕೂ ಮುನ್ನ NDA ಸರ್ಕಾರವಿರುವ ಎಲ್ಲಾ 21 ರಾಜ್ಯಗಳಲ್ಲಿ UCC ಜಾರಿ: ಗೃಹ ಸಚಿವ ಅಮಿತ್ ಶಾ

ಪ್ರಧಾನಿ ಮೋದಿ ಭೇಟಿ ಮಾಡಿದ ಸ್ಕೂಲ್‌ಮೇಟ್; ಭೂ ವಿವಾದದ ಬಗ್ಗೆ CBI ತನಿಖೆಗೆ ಮನವಿ!

"ಇಂತಹ ಆಟಗಾರರನ್ನು ಇಟ್ಟುಕೊಂಡು ಏನು ಮಾಡುತ್ತಿದ್ದಾರೆ?"; ಪಾಕಿಸ್ತಾನ ಕ್ರಿಕೆಟ್‌ ತಂಡದ ಸ್ಥಿತಿ ಕಂಡು Dinesh Karthik ಗರಂ

ಎಲ್ಲೇ ಗಣಪತಿ ಹಬ್ಬಕ್ಕೆ ತೊಂದರೆ ಆದರೂ ನಾನು ಬರ್ತೀನಿ: ಹಿಂದೂಗಳ ತಂಟೆಗೆ ಹೋದರೆ ಹುಷಾರ್: ಸರ್ಕಾರಕ್ಕೆ ಅಶೋಕ್ ವಾರ್ನಿಂಗ್