ಸಾಂದರ್ಭಿಕ ಚಿತ್ರ  
ರಾಜ್ಯ

4 ಲಕ್ಷ ರೂ ಗೆ 7 ವರ್ಷದ ಬಾಲಕನ ಮಾರಾಟ ಪ್ರಕರಣ: ನಾಲ್ವರ ಬಂಧನ; 3 ತಿಂಗಳಲ್ಲಿ ಇದು ಮೂರನೇ ಘಟನೆ!

ಶಿವಬಸಪ್ಪ ಮಗ್ದುಮ್ ಮತ್ತು ಕೊಲ್ಲಾಪುರ ಮತ್ತು ಕಾರವಾರದ ಕೆಲವು ಮಧ್ಯವರ್ತಿಗಳು ಬಾಲಕನನ್ನು ಬೆಳಗಾವಿ ನಗರದ ದಿಲ್ಶಾದ್ ಸಿಕಂದರ್ ತಹಶೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಪ್ರಕರಣ ಇದಾಗಿದೆ.

ಬಂಧಿತರನ್ನು ಸುಲ್ತಾನಪುರದ ಸದಾಶಿವ ಶಿವಬಸಪ್ಪ ಮಗ್ದುಮ್ (32ವ), ಸುಲ್ತಾನಪುರದ ಭಾದ್ಗಾಂವ್ ಮೂಲದ ಲಕ್ಷ್ಮಿ ಬಾಬು ಗೋಲ್ಭಾವಿ (38ವ), ಕೊಲ್ಹಾಪುರದ ನಾಗಲಾ ಪಾರ್ಕ್‌ನ ಅಂಬೇಡ್ಕರ್ ನಗರದ ನಿವಾಸಿ ಸಂಗೀತಾ ವಿಷ್ಣು ಸಾವಂತ್ (40ವ), ಮತ್ತು ಕಾರವಾರದ ಹಳಿಯಾಳ ತಾಲ್ಲೂಕಿನ ಕೆಸ್ರೋಲಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ (50ವ) ಎಂದು ಗುರುತಿಸಲಾಗಿದೆ.

ಶಿವಬಸಪ್ಪ ಮಗ್ದುಮ್ ಮತ್ತು ಕೊಲ್ಲಾಪುರ ಮತ್ತು ಕಾರವಾರದ ಕೆಲವು ಮಧ್ಯವರ್ತಿಗಳು ಬಾಲಕನನ್ನು ಬೆಳಗಾವಿ ನಗರದ ದಿಲ್ಶಾದ್ ಸಿಕಂದರ್ ತಹಶೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಭೀಮಶಂಕರ್ ಗುಲೇದ್ ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳಿರುವ ದಿಲ್ಶಾದ್ ಗಂಡು ಮಗು ಬೇಕೆಂದು ಬಯಸಿದ್ದರು.

ಮಗ್ದುಮ್ ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಸಂಗೀತಾ ಗುಡಪ್ಪ ಕಮ್ಮಾರ್ (30ವ) ಅವರನ್ನು ವಿವಾಹವಾದರು. ಮಗ್ದುಮ್ ಅವರ ಹಿಂದಿನ ಮದುವೆಯಿಂದ ಮಕ್ಕಳಿದ್ದರು. ಅವರ ಮಕ್ಕಳು ಆಗಾಗ್ಗೆ ಜಗಳವಾಡುತ್ತಿದ್ದರು. ಇದರಿಂದ ಬೇಸತ್ತ ಮಗ್ದುಮ್ ಹುಡುಗನನ್ನು ಮಾರಾಟ ಮಾಡಲು ಬಯಸಿದ್ದರು.

ಲಕ್ಷ್ಮಿ ನಾಲ್ಕು ತಿಂಗಳ ಹಿಂದೆ ಮಗ್ದುಮ್ ಸಂಗೀತಾಳನ್ನು ಮದುವೆಯಾಗಲು ಸಹಾಯ ಮಾಡಿದರು. ಅವರು ಸಂಗೀತಾ ಜೊತೆ ಪಿತೂರಿ ನಡೆಸಿ ಕಾರವಾರದ ಕೆಸ್ರೋಲಿಯಲ್ಲಿರುವ ಅನಸುಯಾ ದೊಡ್ಮನಿ ಎಂಬುವವರಿಗೆ ಬಾಲಕನನ್ನು ಹಸ್ತಾಂತರಿಸುವಂತೆ ಕೇಳಿಕೊಂಡರು. ನಂತರ ಅನಸುಯಾ ಬಾಲಕನನ್ನು ಅನಾಥ ಎಂದು ದಿಲ್ಶಾದ್ ಗೆ ಮಾರಿದರು,

ಈ ಮಧ್ಯೆ, ಬಾಲಕನ ತಾಯಿ ಸಂಗೀತಾ ಕಮ್ಮಾರ್ ತಮ್ಮ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದರು. ಪೊಲೀಸ್ ತಂಡವು ಬೈಲಹೊಂಗಲ ಬಳಿಯ ಹಳ್ಳಿಯಲ್ಲಿ ಬಾಲಕನನ್ನು ಪತ್ತೆ ಹಚ್ಚಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT