ಗ್ರಾಮದಲ್ಲಿ ಕಂಡು ಬಂದ ಫ್ಲೆಕ್ಸ್. 
ರಾಜ್ಯ

ಈಡೇರದ ಭರವಸೆ: ಸಿದ್ದರಾಮಯ್ಯ ತವರು ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ

ಇದೀಗ ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್‌ಗಳು ಅಲ್ಲಲ್ಲಿ ಕಾಣಿಸಿಕೊಂಡಿದೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಧಾನಸಭೆ ಕ್ಷೇತ್ರವಾದ ವರುಣಾದಲ್ಲೇ ಜನರು ಕಾಂಗ್ರೆಸ್‌ ನಾಯಕರಿಗೆ ಬಹಿಷ್ಕಾರ ಹಾಕಿದ ಬೆಳವಣಿಗೆಯೊಂದು ಮಂಗಳವಾರ ನಡೆದಿದೆ.

ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಸೇರಿದಂತೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿದ ಭರವಸೆಗಳನ್ನು ಈಡೇರಿಸದ ಕಾರಣ, ಬೇಸತ್ತ ಗ್ರಾಮಸ್ಥರು ಕಾಂಗ್ರೆಸ್ ನಾಯಕರಿಗೆ ಬಹಿಷ್ಕಾರ ಹಾಕಿದ್ದಾರೆ.

ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿ ಪ್ರತಿಷ್ಠಾನಕ್ಕೆ 3 ಲಕ್ಷ ಮೀಸಲಿಟ್ಟಿದ್ದರು. ಬಳಿಕ ಸಮುದಾಯದ ಮುಖಂಡರು ರೂ.20 ಲಕ್ಷ ಮೀಸಲಿಡುವಂತೆ ಮನವಿ ಮಾಡಿದ್ದರು. ಆದರೆ, ಸರ್ಕಾರ 3 ಲಕ್ಷ ನೀಡುವುದಾಗಿ ತಿಳಿಸಿದ್ದು, ಇದೇ ಅಸಮಾಧಾನಕ್ಕ ಕಾರಣವಾಗಿದೆ ಎಂದು ಹೇಳಲಾಗತ್ತಿದೆ.

ಇದೀಗ ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್‌ಗಳು ಅಲ್ಲಲ್ಲಿ ಕಾಣಿಸಿಕೊಂಡಿದೆ. ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳಲ್ಲಿ ಬರೆಯಲಾಗಿದೆ.

ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಲಾಗಿದೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ, ಇದೀಗ ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT