ಸಾಂದರ್ಭಿಕ ಚಿತ್ರ 
ರಾಜ್ಯ

ಮಡಿಕೇರಿ: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು; ಸಂಬಂಧಿಕರ ಪ್ರತಿಭಟನೆ

ಅರಿವಳಿಕೆ ಮದ್ದು ನೀಡಿದ ನಂತರ ಆಕೆಯ ಆರೋಗ್ಯ ಹದಗೆಟ್ಟಿತು. ಇದಾದ ನಂತರ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಯಿತು, ಆದರೆ, ಆಸ್ಪತ್ರೆಯ ಆಡಳಿತ ಮಂಡಳಿಯು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.

ಮಡಿಕೇರಿ: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಡಿಕೇರಿ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ.

ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಸಂತಾನಹರಣ ಯೋಜನೆಯಡಿ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು. ಮಂಗಳವಾರ ಒಟ್ಟು 12 ಮಹಿಳೆಯರು ಸಂತಾನಹರಣ ಶಸ್ತ್ರಚಿಕಿತ್ಸೆಗೆ ನೋಂದಾಯಿಸಿಕೊಂಡಿದ್ದರು. ಅದೇ ರೀತಿ, ಪಿರಿಯಾಪಟ್ಟಣ ತಾಲೂಕಿನ ನಿವಾಸಿ ಶಾಂತಿ (27) ಅವರನ್ನು ಮಂಗಳವಾರ ಶಸ್ತ್ರಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು.

ಆದರೆ, ಅರಿವಳಿಕೆ ಮದ್ದು ನೀಡಿದ ನಂತರ ಆಕೆಯ ಆರೋಗ್ಯ ಹದಗೆಟ್ಟಿತು. ಇದಾದ ನಂತರ ಅವರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಯಿತು, ಆದರೆ, ಆಸ್ಪತ್ರೆಯ ಆಡಳಿತ ಮಂಡಳಿಯು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು, ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸುವ ಮಧ್ಯೆಯೇ ಆಕೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.

ಆದರೆ, ಸಂತ್ರಸ್ತೆಯ ಸಂಬಂಧಿಕರು ಜಿಲ್ಲಾ ಆಸ್ಪತ್ರೆಯಲ್ಲಿ ಜಮಾಯಿಸಿ, ಮಹಿಳೆಯ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿದರು. ಅವರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿ, ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದರು.

ನನ್ನ ಹೆಂಡತಿ ಸಂಪೂರ್ಣವಾಗಿ ಆರೋಗ್ಯವಾಗಿದ್ದಳು. ಆಪರೇಷನ್ ಥಿಯೇಟರ್‌ಗೆ ಹೋಗುವ ಮೊದಲು ಅವಳು ನಮ್ಮ ಮಗುವಿಗೆ ಎರಡು ಬಾರಿ ಹಾಲುಣಿಸಿದಳು. ಒಳಗೆ ಏನಾಯಿತು ಎಂದು ನಮಗೆ ಗೊತ್ತಿಲ್ಲ. ಆಕೆಯನ್ನು ನೋಡಲು ಅವರು ನಮಗೆ ಬಿಡಲಿಲ್ಲ ಎಂದು ಮಹಿಳೆ ಪತಿ ಚೆಲ್ಲಾದೋರೆ ಅಳಲು ತೋಡಿಕೊಂಡಿದ್ದಾರೆ.

ಇದಲ್ಲದೆ, ವೈದ್ಯಕೀಯ ನಿರ್ಲಕ್ಷ್ಯದ ವಿರುದ್ಧ ಕುಟುಂಬವು ಪೊಲೀಸ್ ದೂರು ದಾಖಲಿಸಿದೆ. ತನಿಖೆ ನಡೆಯುತ್ತಿರುವಾಗಲೂ ಸ್ಥಳ ಪರಿಶೀಲನೆ ನಡೆಸಲಾಯಿತು. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಪತಿ, ಮಗ ಮತ್ತು 4 ತಿಂಗಳ ಮಗುವನ್ನು ಅಗಲಿದ್ದಾರೆ.

ಶಸ್ತ್ರಚಿಕಿತ್ಸೆಗೆ ನಿಗದಿಯಾಗಿದ್ದ ಎರಡನೇ ರೋಗಿಯಾಗಿ ಶಾಂತಿ ದಾಖಲಾಗಿದ್ದರು ಎಂದು ಕೊಡಗು ಎಸ್‌ಪಿ ಕೆ. ರಾಮರಾಜನ್ ದೃಢಪಡಿಸಿದರು. ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ತನಿಖೆ ನಡೆಯಲಿದೆ ಎಂದು ಅವರು ಹೇಳಿದರು.

ಕೊಡಗು, ದಕ್ಷಿಣ ಕನ್ನಡ ಮತ್ತು ಇತರ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ತಂಡವು ಶಸ್ತ್ರ ಚಿಕಿತ್ಸೆ ನಡೆಸಿತ್ತು. ಈ ತಂಡವು ನಡೆಸಿದ 20 ವರ್ಷಗಳ ಶಸ್ತ್ರ ಚಿಕಿತ್ಸೆಯಲ್ಲಿ ಇದು ಮೊದಲ ಸಾವು ಎಂದು ಡಿಎಚ್‌ಒ ಡಾ. ಸತೀಶ್ ತಿಳಿಸಿದ್ದಾರೆ. ಈ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT