ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಗೂಡ್ಸ್ ವಾಹನ ಪಲ್ಟಿ; 25 ನರೇಗಾ ಕಾರ್ಮಿಕರಿಗೆ ಗಾಯ, ಬೈಕ್ ಸವಾರ ಸಾವು

ಮೃತರನ್ನು ದಾವಣಗೆರೆ ಜಿಲ್ಲೆಯ ಅವರಗೊಳ್ಳ ಗ್ರಾಮದ ನಿವಾಸಿ ಅಡಿವೆಪ್ಪ ಬಸವಣ್ಣಿ ಅಂಕಲಿ ಎಂದು ಗುರುತಿಸಲಾಗಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಹೊಸೂರು ಗ್ರಾಮದ ಬಳಿ ಗುರುವಾರ ನರೇಗಾ ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಪಘಾತದಲ್ಲಿ 42 ವರ್ಷದ ಬೈಕ್ ಸವಾರ ಸಾವನ್ನಪ್ಪಿದ್ದಾರೆ ಮತ್ತು 25 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ದಾವಣಗೆರೆ ಜಿಲ್ಲೆಯ ಅವರಗೊಳ್ಳ ಗ್ರಾಮದ ನಿವಾಸಿ ಅಡಿವೆಪ್ಪ ಬಸವಣ್ಣಿ ಅಂಕಲಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, 45 ನರೇಗಾ ಕಾರ್ಮಿಕರು ಕೆಲಸಕ್ಕಾಗಿ ಯಮಕಮಮರಡಿಯಿಂದ ಹಿಡಕಲ್ ಅಣೆಕಟ್ಟಿಗೆ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಬೈಕ್ ಇದ್ದಕ್ಕಿದ್ದಂತೆ ಅಡ್ಡ ಬಂದಿದೆ.

ಬೈಕ್ ಗೆ ಡಿಕ್ಕಿ ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ಕಳೆದುಕೊಂಡ ಗೂಡ್ಸ್ ವಾಹನ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸೂರು ಗ್ರಾಮದಿಂದ ಬರುತ್ತಿದ್ದ ಬೈಕ್ ಸವಾರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಟ್ಟು 25 ಮಂದಿ ಗಾಯಗೊಂಡಿದ್ದು, ಅವರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಮೂರು ವಿಭಿನ್ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT