ಅಪಘಾತ 
ರಾಜ್ಯ

ರಾಯಚೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ

ಕೆಎಸ್ಆರ್ಟಿಸಿ ಬಸ್ ಅಂಕಲಿಮಠದಿಂದ ಮುದ್ಗಲ್ ಕಡೆ ಹೊರಟಿತ್ತು. ಮತ್ತೊಂದೆಡೆ ಟ್ರ್ಯಾಕ್ಟರ್ ಬನ್ನಿಗೋಳದಿಂದ ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿತ್ತು.

ರಾಯಚೂರು: ರಾಯಚೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ 18 ಮಂದಿಗೆ ಗಾಯವಾಗಿರುವ ಘಟನೆ ರಾಯಚೂರಿನ ಬನ್ನಿಗೋಳ ಹೊರವಲಯದಲ್ಲಿ ಗುರುವಾರ ನಡೆದಿದೆ.

ನಿನ್ನೆಯಷ್ಟೇ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿದೆ.

ಕೆಎಸ್ಆರ್ಟಿಸಿ ಬಸ್ ಮತ್ತು ಟ್ರ್ಯಾಕ್ಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಿಂಗಸಗೂರು ತಾಲೂಕಿನ ಬನ್ನಿಗೋಳ ಗ್ರಾಮದ ನಿವಾಸಿ ಶ್ರೀದೇವಿ (19) ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಕೆಎಸ್ಆರ್ಟಿಸಿ ಬಸ್ ಅಂಕಲಿಮಠದಿಂದ ಮುದ್ಗಲ್ ಕಡೆ ಹೊರಟಿತ್ತು. ಮತ್ತೊಂದೆಡೆ ಟ್ರ್ಯಾಕ್ಟರ್ ಬನ್ನಿಗೋಳದಿಂದ ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿತ್ತು. ಈ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ. ಎಂದು ತಿಳಿದುಬಂದಿದೆ.

ಗಾಯಾಳುಗಳನ್ನು ಲಿಂಗಸಗೂರು & ಮುದ್ಗಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಮುದ್ಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT