ಸಿದ್ದರಾಮಯ್ಯ  
ರಾಜ್ಯ

MUDA ಹಗರಣದಲ್ಲಿ CM ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್​ಚಿಟ್? ಸೋಮವಾರ ಕೋರ್ಟ್ ಗೆ ವರದಿ ಸಲ್ಲಿಕೆ!

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ತಿಳಿದು ಬಂದಿದೆ.

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

ಮತ್ತೊಂದೆಡೆ, ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಏತನ್ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್​​ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್