ಭರತ್ ಶೆಟ್ಟಿ 
ರಾಜ್ಯ

ಕೋಟೆಕಾರು ಬ್ಯಾಂಕ್‌ ದರೋಡೆ: ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ- ಶಾಸಕ ಭರತ್‌ ಶೆಟ್ಟಿ ಆರೋಪ

ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ, ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ನೈಜ ಆರೋಪಿಗಳನ್ನು ಬಯಲಿಗೆ ತನ್ನಿ. ದರೋಡೆಕೊರರಿಗೆ ರಾಜಕೀಯ ಬೆಂಬಲ ಇದೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ. ಬೇರೆ ಪ್ರಕರಣಗಳಲ್ಲಿ ಶಾಮೀಲಾದವರೂ ದರೋಡೆ ಪ್ರಕರಣದಲ್ಲಿದ್ದಾರೆ ಎಂದು ಭರತ್ ಶೆಟ್ಟಿ ದೂರಿದ್ದಾರೆ.

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಮಾಡಿದ ಮೂವರ ಬಂಧನ ಈಗಾಗಲೇ ಆಗಿದೆ. ಮುಂಬೈನ ಕಣ್ಣನ್ ಮಣಿ ಗುಂಡೇಟು ತಿಂದು ಪೊಲೀಸರ ವಶದಲ್ಲಿದ್ದರೆ, ಕಿಂಗ್​ಪಿನ್ ತುಮಿಳುನಾಡಿನ ಮುರುಗನ್ ಡಿ ದೇವರ್, ಸಹಚರ ರಾಜೇಂದ್ರನ್​ನನ್ನ ನಿನ್ನೆ ಮಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT