ಭರತ್ ಶೆಟ್ಟಿ 
ರಾಜ್ಯ

ಕೋಟೆಕಾರು ಬ್ಯಾಂಕ್‌ ದರೋಡೆ: ಪ್ಲಾನ್‌ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ- ಶಾಸಕ ಭರತ್‌ ಶೆಟ್ಟಿ ಆರೋಪ

ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಂಗಳೂರು: ಕೋಟೆಕಾರು ಬ್ಯಾಂಕ್ ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ, ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಇದೆ. ನೈಜ ಆರೋಪಿಗಳನ್ನು ಬಯಲಿಗೆ ತನ್ನಿ. ದರೋಡೆಕೊರರಿಗೆ ರಾಜಕೀಯ ಬೆಂಬಲ ಇದೆ. ಅವರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದೆ. ಬೇರೆ ಪ್ರಕರಣಗಳಲ್ಲಿ ಶಾಮೀಲಾದವರೂ ದರೋಡೆ ಪ್ರಕರಣದಲ್ಲಿದ್ದಾರೆ ಎಂದು ಭರತ್ ಶೆಟ್ಟಿ ದೂರಿದ್ದಾರೆ.

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಮಾಡಿದ ಮೂವರ ಬಂಧನ ಈಗಾಗಲೇ ಆಗಿದೆ. ಮುಂಬೈನ ಕಣ್ಣನ್ ಮಣಿ ಗುಂಡೇಟು ತಿಂದು ಪೊಲೀಸರ ವಶದಲ್ಲಿದ್ದರೆ, ಕಿಂಗ್​ಪಿನ್ ತುಮಿಳುನಾಡಿನ ಮುರುಗನ್ ಡಿ ದೇವರ್, ಸಹಚರ ರಾಜೇಂದ್ರನ್​ನನ್ನ ನಿನ್ನೆ ಮಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!

ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು: ನೋಡ್ರಪಾ, ನೀವು ಅದೆಲ್ಲಾ ಕನಸು ಕಾಣಲು ಹೋಗಬೇಡಿ; ವಿಪಕ್ಷಗಳ ಕಾಲೆಳೆದ ಡಿಕೆಶಿ

SCROLL FOR NEXT