ಸಂಗ್ರಹ ಚಿತ್ರ 
ರಾಜ್ಯ

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; 8 ಮಂದಿ ವಿರುದ್ಧ ಪ್ರಕರಣ ದಾಖಲು

ಮೆಹಬೂಬ್ ಅಲಿ ತಾರಿಹಾಳ್ ಎಂಬಾತ ಕೆಲಸದ ನೆಪದಲ್ಲಿ ಯುವಕನ ಕರೆಸಿಕೊಂಡು ಅಹರಿಸಿದ್ದಾನೆ.

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿದ ಗುಂಪೊಂದು ಮನಬಂದಂತೆ ಥಳಸಿರುವ ಘಟನೆಯೊಂದು ಟಿಪ್ಪುನಗರದ ಕಸಬಾ ಪೊಲೀಸ್‌ ಠಾಣೆ ಬಳಿ ಮಂಗಳವಾರ ಘಟನೆ ವರದಿಯಾಗಿದೆ.

ಮುಜಾಫರ್ ಕಲ್ಬುರ್ಗಿ (28) ಹಲ್ಲೆಗೊಳಗಾದ ಯುವಕ. ಪ್ರಕರಣ ಸಂಬಂಧ 8 ಮಂದಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಮೆಹಬೂಬ್ ಅಲಿ ತಾರಿಹಾಳ್ ಎಂಬಾತ ಕೆಲಸದ ನೆಪದಲ್ಲಿ ಯುವಕನ ಕರೆಸಿಕೊಂಡು ಅಹರಿಸಿದ್ದಾನೆ. ಬಳಿಕ ಹುಬ್ಬಳ್ಳಿ ನಗರದ ಹೊರವಲಯದಲ್ಲಿರುವ ವರೂರು ಗ್ರಾಮದ ಬಳಿಯ ದರ್ಗಾಕ್ಕೆ ಕರೆದೊಯ್ದಿದ್ದು, ಅಲ್ಲಿ ಬೆತ್ತಲೆಗೊಳಿಸಿ, ಮನಬಂದಂತೆ ಥಳಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೆಹಬೂಬ್ ಜೊತೆಗೆ ಇನ್ನೂ 10 ಮಂದಿ ನನ್ನ ಮೇಲೆ ಹಲ್ಲೆ ನಡೆಸಿದರು. ಬಳಿಕ ಆಟೋರಿಕ್ಷಾದಲ್ಲಿ ಕಟ್ಟಿ ಹಾಕಿ ಹುಬ್ಬಳ್ಳಿಗೆ ಕರೆದೊಯ್ದು ಮೆರವಣಿಗೆ ಮಾಡಿದರು ಎಂದು ಯುವಕ ತಿಳಿಸಿದ್ದಾನೆ.

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದೇನೆಂದು ಶಂಕಿಸಿ ನನ್ನ ಮೇಲೆ ಹಲ್ಲೆ ನಡೆಸಿದರು. ಯಾವುದೇ ಸಂಬಂಧವಿಲ್ಲ ಎಂದು ಮನವರಿಕೆ ಮಾಡಿಕೊಡಲು ಯತ್ನಿಸಿದರೂ ನನ್ನ ಮಾತನ್ನು ಕೇಳಲಿಲ್ಲ. ರಕ್ಷಣೆಗೆ ಬಂದ ತಾಯಿ ಮೇಲೂ ಹಲ್ಲೆ ನಡೆಸಿದ್ದಾರೆ. ತಾಯಿ ಕೂಡ ದಾಳಿಯಲ್ಲಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಹೇಳಿದ್ದಾನೆ.

ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹುಡುಕಾಟ ಆರಂಭಿಸಿದ್ದಾರೆ. ಅಕ್ರಮ ಸಂಬಂಧದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT