ನಜ್ಮಾ - ಕಲ್ಕೆರೆ ಕೆರೆ 
ರಾಜ್ಯ

ಬೆಂಗಳೂರಿನಲ್ಲಿ ಬಾಂಗ್ಲಾದೇಶಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದು, ಈ ಸಂಬಂಧ ರಾಮಮೂರ್ತಿನಗರ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ಕಲ್ಕೆರೆಯ ದುಬಾರಿ ವಸತಿ ಅಪಾರ್ಟ್‌ಮೆಂಟ್‌ನಲ್ಲಿ ಮನೆಗೆಲಸ ಮಾಡುತ್ತಿದ್ದ ಬಾಂಗ್ಲಾದೇಶದ 28 ವರ್ಷದ ಮಹಿಳೆ ಶುಕ್ರವಾರ ಬೆಳಗ್ಗೆ ಕಲ್ಕೆರೆ ಕೆರೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದು, ಈ ಸಂಬಂಧ ರಾಮಮೂರ್ತಿನಗರ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತೆಯನ್ನು ನಜ್ಮಾ ಎಂದು ಗುರುತಿಸಲಾಗಿದ್ದು, ಕಲ್ಕೆರೆ ನಿವಾಸಿಯಾಗಿದ್ದರು. ಆಕೆಯ ಪತಿ ಸುಮನ್ ಬಿಬಿಎಂಪಿಯಲ್ಲಿ ಪೌರಕಾರ್ಮಿಕರಾಗಿದ್ದಾರೆ.

ಮೂರು ಮಕ್ಕಳ ತಾಯಿಯಾಗಿರುವ ನಜ್ಮಾ ಗುರುವಾರ ಮಧ್ಯಾಹ್ನ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಶಂಕಿಸಲಾಗಿದೆ.

ಪತ್ನಿ ಮನೆಗೆ ಹಿಂತಿರುಗದ ಕಾರಣ, ಆಕೆಯ ಪತಿ ಹುಡುಕಾಟ ನಡೆಸಿದ್ದರು ಮತ್ತು ನಂತರ ಹಿಂತಿರುಗಬಹುದೆಂದು ಭಾವಿಸಿ ಮನೆಗೆ ಹಿಂತಿರುಗಿ ಕಾಯುತ್ತಿದ್ದರು. ಆದರೆ ಶುಕ್ರವಾರ ಬೆಳಗ್ಗೆ, ಬೆಳಗಿನ ವಾಕರ್ ಒಬ್ಬರು ಕೆರೆಯ ಬಳಿ ಶವವನ್ನು ನೋಡಿ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

"ಮೊದಲ ನೋಟದಲ್ಲೇ ಕೊಲೆಗೂ ಮುನ್ನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಕಂಡುಬರುತ್ತಿದೆ. ಘಟನೆ ಗುರುವಾರ ಸಂಜೆ ಅಥವಾ ರಾತ್ರಿ ನಡೆದಿರಬೇಕು. ಸಂತ್ರಸ್ತೆ ಅಕ್ರಮ ಮಾರ್ಗದ ಮೂಲಕ ದೇಶ ಪ್ರವೇಶಿಸಿರುವ ಶಂಕೆ ವ್ಯಕ್ತವಾಗಿದೆ. ಆಕೆಯ ಬಗ್ಗೆ ಯಾವುದೇ ಸ್ಥಳೀಯ ದಾಖಲೆ ಪುರಾವೆಗಳಿಲ್ಲ ಎಂದು ಪೊಲೀಸರ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದಾಗ್ಯೂ, ಆಕೆಯ ಪತಿ ಬಳಿ ದಾಖಲೆಗಳಿದ್ದು, ಅವರು ಬಾಂಗ್ಲಾದೇಶದವರೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. ಕುಟುಂಬವು ಕಳೆದ ಐದು ವರ್ಷಗಳಿಂದ ನಗರದಲ್ಲಿ ವಾಸಿಸುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆವಲಹಳ್ಳಿಯ ವಿರ್ಗೋ ನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ" ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್