ರಾಜ್ಯ

ಮಂಗಳೂರು: ED ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿ ಮನೆಗೆ ನುಗ್ಗಿ 30 ಲಕ್ಷ ರೂ ದರೋಡೆ, ಆರೋಪಿ ಬಂಧನ

ಜ.6ರಂದು 6 ಜನ ದುಷ್ಕರ್ಮಿಗಳು ತಾವು ಇಡಿ ಅಧಿಕಾರಿಗಳೆಂದು ಹೇಳಿ ಸಿಂಗಾರಿ ಬೀಡಿ ಉದ್ಯಮಿಯ ಮನೆಯಲ್ಲಿ ಶೋಧ ನಡೆಸಿದ್ದರು.

ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯೊಬ್ಬರ ಮನೆಗೆ ದಾಳಿ ನಡೆಸಿ 30 ಲಕ್ಷ ನಗದು ದರೋಡೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಕೇರಳದ ಕೊಲ್ಲಂ ಜಿಲ್ಲೆಯ ಯಸುದಾಸ್ ಲಿಯಾನ್ ಫರ್ನಾನ್ಸ್ ಎಂಬವರ ಪುತ್ರ ಅನಿಲ್ ಫೆರ್ನಾಂಡಿಸ್ (49) ಎಂದು ಗುರುತಿಸಲಾಗಿದೆ.

ಜ.6ರಂದು 6 ಜನ ದುಷ್ಕರ್ಮಿಗಳು ತಾವು ಇಡಿ ಅಧಿಕಾರಿಗಳೆಂದು ಹೇಳಿ ಸಿಂಗಾರಿ ಬೀಡಿ ಉದ್ಯಮಿಯ ಮನೆಯಲ್ಲಿ ಶೋಧ ನಡೆಸಿದ್ದರು. ಸುಮಾರು 30 ಲಕ್ಷ ನಗದು ದೋಚಿ, ಇದಕ್ಕೆ ಸಂಬಂಧಿಸಿ ದಾಖಲೆ ನೀಡುವಂತೆ ಸೂಚಿಸಿ ಮಂಗಳೂರಿನ ಕಚೇರಿಗೆ ಭೇಟಿ ನೀಡುವಂತೆ ಹೇಳಿದ್ದರು.

ಹಣ ಪಡೆದುಕೊಂಡು ಹೋದ ಬಳಿಕ ಮೊಬೈಲ್ ನಂಬರ್​ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದರು. ಈ ಆರೋಪಿಗಳ ಪತ್ತೆಗೆ ಪೊಲೀಸ್ ಅಧೀಕ್ಷಕ ಯತೀಶ್ ಎನ್ ಅವರ ಆದೇಶದ ಮೇರೆಗೆ 4 ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಕೇರಳ ರಾಜ್ಯದ ಈ ಆರೋಪಿಯಿಂದ ಕೃತ್ಯಕ್ಕೆ ಉಪಯೋಗಿಸಿದ ಕಾರು, 5 ಲಕ್ಷ ರೂಪಾಯಿ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ ನಂಬರ್ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣದಲ್ಲಿ ಉಳಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡಗಳು ಕಾರ್ಯನಿರ್ವಹಿಸಿರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT