ಸಿದ್ದರಾಮಯ್ಯ-ಥಾವರ್ ಚಂದ್ ಗೆಹ್ಲೋಟ್ PTI
ರಾಜ್ಯ

ರಾಜಭವನ-ಸರ್ಕಾರದ ನಡುವಿನ ಜಟಾಪಟಿ: ಏಳು ಮಸೂದೆಗಳಿಗೆ ರಾಜ್ಯಪಾಲರು ಸಹಿ ಹಾಕಿಲ್ಲ- ಎಚ್.ಕೆ ಪಾಟೀಲ್

ರಾಜ್ಯಪಾಲರು (ಸರ್ಕಾರಕ್ಕೆ) ಹಿಂತಿರುಗಿಸಿರುವ ಅಥವಾ ಸ್ಪಷ್ಟೀಕರಣ ಕೇಳಿರುವ ಮಸೂದೆಗಳು ಸಂಸದೀಯ ವ್ಯವಹಾರಗಳು ಮತ್ತು ರಾಜ್ಯಪಾಲರಿಗೂ ಸಂಬಂಧಿಸಿವೆ. ಅದಕ್ಕಾಗಿಯೇ ಈ ಸಮಯದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಸಚಿವರು ಹೇಳಿದರು.

ಬೆಂಗಳೂರು: ಕನಿಷ್ಠ ಏಳು ಮಸೂದೆಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಹಿ ಹಾಕಿಲ್ಲ. ಈ ವಿಚಾರವಾಗಿ ರಾಜ್ಯ ಸರ್ಕಾರ ತನ್ನ ಪ್ರಯತ್ನವನ್ನು ಮುಂದುವರೆಸುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಇದು ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯಪಾಲರ ಬಳಿ ಏಳು ಮಸೂದೆಗಳು ಬಾಕಿ ಇದ್ದು, ಈ ಮಸೂದೆಗಳ ಕುರಿತು ರಾಜ್ಯಪಾಲರು ಸ್ಪಷ್ಟೀಕರಣ ಕೋರಿದ್ದಾರೆ ಎಂದರು.

ರಾಜ್ಯಪಾಲರು (ಸರ್ಕಾರಕ್ಕೆ) ಹಿಂತಿರುಗಿಸಿರುವ ಅಥವಾ ಸ್ಪಷ್ಟೀಕರಣ ಕೇಳಿರುವ ಮಸೂದೆಗಳು ಸಂಸದೀಯ ವ್ಯವಹಾರಗಳು ಮತ್ತು ರಾಜ್ಯಪಾಲರಿಗೂ ಸಂಬಂಧಿಸಿವೆ. ಅದಕ್ಕಾಗಿಯೇ ಈ ಸಮಯದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಸಚಿವರು ಹೇಳಿದರು.

ಮಸೂದೆಗಳು ಅನುಮೋದನೆ ಸಿಗದಿದ್ದರೆ ಮುಂದು ಸರ್ಕಾರ ಯಾವ ಕ್ರಮಕೈಗೊಳ್ಳಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನು ಇಲಾಖೆಯ ಅಧಿಕಾರಿಗಳ ಪ್ರಕಾರ, ಡಿಸೆಂಬರ್ 2024ರಲ್ಲಿ ಬೆಳಗಾವಿ ಅಧಿವೇಶನದಲ್ಲಿ ಅನುಮೋದನೆ ಪಡೆದ ನಾಲ್ಕು ಮಸೂದೆಗಳನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗಿದೆ ಆದರೆ ಇನ್ನೂ ಅನುಮೋದನೆ ಪಡೆದಿಲ್ಲ. ಅವುಗಳೆಂದರೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮಸೂದೆ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು (ತಿದ್ದುಪಡಿ) ಮಸೂದೆ, ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ. ರಾಜ್ಯಪಾಲರು ಸ್ಪಷ್ಟೀಕರಣ ಕೋರಿರುವ ಐದು ಮಸೂದೆಗಳಿದ್ದು, ಆಡಳಿತ ಇಲಾಖೆಯಲ್ಲಿ ಬಾಕಿ ಉಳಿದಿವೆ ಎಂದರು.

ಕರ್ನಾಟಕ ಸಹಕಾರಿ ಸಂಘಗಳು (ತಿದ್ದುಪಡಿ) ಮಸೂದೆ, ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ, ಗದಗ ಬೆಟಗಿರಿ ವ್ಯವಹಾರ, ಸಂಸ್ಕೃತಿ ಮತ್ತು ಪ್ರದರ್ಶನ ಪ್ರಾಧಿಕಾರ ಮಸೂದೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ದತ್ತಿ ದತ್ತಿ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಖನಿಜ ಹಕ್ಕುಗಳ ತೆರಿಗೆ ಮಸೂದೆ ಸೇರಿದೆ ಎಂದರು.

ಇನ್ನು ನಾಗರಿಕ ಕಾರ್ಯವಿಧಾನ ಸಂಹಿತೆ (ಕರ್ನಾಟಕ ತಿದ್ದುಪಡಿ) ಮಸೂದೆಯನ್ನು 2025ರ ಜನವರಿ 17ರಂದು ಭಾರತದ ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗಿದೆ. ಅದು ಬಾಕಿ ಉಳಿದಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT