ಸಿಎಂ ಸಿದ್ದರಾಮಯ್ಯ 
ರಾಜ್ಯ

MUDA ಹಗರಣ: ಲೋಕಾಯುಕ್ತ ಕ್ಲೀನ್ ಚಿಟ್ ಬಗ್ಗೆ ಗೊತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ತಮಗೆ ಬೇಕಾದಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಅಕ್ರಮವಾಗಿ ತಮಗೆ ಬೇಕಾದಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಹಗರಣ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಜನವರಿ 27ರಂದು ವಿಚಾರಣೆ ನಡೆಸಲಿರುವ ಹೈಕೋರ್ಟ್, ಅಷ್ಟರೊಳಗೆ ತನಿಖಾ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿತ್ತು.

ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಇದೀಗ ತನಿಖೆ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ. ಈ ವರದಿಯಲ್ಲಿ ಸಿಎಂ ಮತ್ತು ಪತ್ನಿ ವಿರುದ್ಧದ ಹೇಳಿಕೆಗೆ ಯಾವುದೇ ಪುರಾವೆಯಿಲ್ಲ. ಅಧಿಕಾರಿಗಳಿಂದ ತಪ್ಪಾಗಿತ್ತು ಎಂದು ವರದಿ ನೀಡಲಾಗಿದೆ ಎನ್ನಲಾಗಿದೆ. ಇದನ್ನು ಇನ್ನೂ ಕೋರ್ಟ್ ಗೆ ಸಲ್ಲಿಕೆ ಮಾಡಿಲ್ಲ.

ಈ ಬೆಳವಣಿಗೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಏನೂ ಗೊತ್ತಿಲ್ಲಾರೀ.. ಏನೂ ಗೊತ್ತಿಲ್ಲ’ ಎಂದು ತಮ್ಮದೇ ಶೈಲಿಯಲ್ಲಿ ಉತ್ತರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್