ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಿಹರ್ಸಲ್ NAGARAJA GADEKAL
ರಾಜ್ಯ

ಜನವರಿ 26 ಗಣರಾಜ್ಯೋತ್ಸವ: ಬೆಂಗಳೂರಿನಲ್ಲಿ ಭದ್ರತೆ, ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ದಿನ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿರುವುದರಿಂದ ನಗರದ ಈ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಈ ಮಾರ್ಗಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ವಿವರಣೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಈ ಬಾರಿ ಗಣರಾಜ್ಯೋತ್ಸವಕ್ಕೆ ಸಕಲ ತಯಾರಿ ನಡೆಸಲಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಪೊಲೀಸ್​ ಭದ್ರತೆ

8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರುತ್ತಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಪ್ರವೇಶ ದ್ವಾರಗಳ ವಿವರ

ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

ವಾಹನ ಸಂಚಾರ ನಿರ್ಬಂಧ

ಜ.26ರಂದು ಬೆಳಗ್ಗೆ 8.30 ರಿಂದ 10.30ರವರೆಗೆ ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರ ಸೂಚನೆ ನೀಡಿದ್ದಾರೆ.

ವಾಹನ ನಿಲುಗಡೆಗೆ ನಿಷೇಧ

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ, ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT