ಪ್ರಾತಿನಿಧಿಕ ಚಿತ್ರ 
ರಾಜ್ಯ

ಕ್ಲಿನಿಕಲ್ ಟ್ರಯಲ್‌ನಲ್ಲಿ ಭಾಗಿಯಾಗಿದ್ದ 33 ವರ್ಷದ ವ್ಯಕ್ತಿ ಸಾವು; ಕಂಪನಿ ವಿರುದ್ಧ ಸಹೋದರನ ಆರೋಪ

ಈ ಸಂಬಂಧ ಸಂತ್ರಸ್ತ ನಾಗೇಶ್ ವೀರಣ್ಣ ಅವರ ಸಹೋದರ ಜನವರಿ 22ರಂದು ದೂರು ದಾಖಲಿಸಿದ್ದಾರೆ.

ಬೆಂಗಳೂರು: ಆರ್ ಅ್ಯಂಡ್ ಡಿ ಕಂಪನಿ ನಡೆಸಿದ ಕ್ಲಿನಿಕಲ್ ಟ್ರಯಲ್‌ನಲ್ಲಿ ಭಾಗಿಯಾಗಿದ್ದ 33 ವರ್ಷದ ವ್ಯಕ್ತಿಯೊಬ್ಬರು ಜಾಲಹಳ್ಳಿಯಲ್ಲಿರುವ ತನ್ನ ಸಹೋದರನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಸಂತ್ರಸ್ತ ನಾಗೇಶ್ ವೀರಣ್ಣ ಅವರ ಸಹೋದರ ಜನವರಿ 22ರಂದು ದೂರು ದಾಖಲಿಸಿದ್ದಾರೆ. ನಾಗೇಶ್ ವೀರಣ್ಣನವರ ಸಾವಿಗೆ ಪ್ರಯೋಗದ ವೇಳೆ ನೀಡಿದ ಔಷಧಗಳ ಅಡ್ಡ ಪರಿಣಾಮವೇ ಕಾರಣ ಎಂದು ರೇವಣ ಸಿದ್ದಪ್ಪ ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 194 (3) ಅಡಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದೇವೆ. ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ರೇವಣ್ಣ ಸಿದ್ದಪ್ಪ ಅವರ ಪ್ರಕಾರ, ಕ್ಲಿನಿಕಲ್ ಟ್ರಯಲ್‌ನಲ್ಲಿ ಭಾಗವಹಿಸುವ ಮುನ್ನ ವೀರಣ್ಣ ಅವರಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ.

ಪೊಲೀಸ್ ವರದಿ ಪ್ರಕಾರ, ಆರ್ & ಡಿ ಕಂಪನಿಯು ಕ್ಲಿನಿಕಲ್ ಟ್ರಯಲ್‌ನಲ್ಲಿ ಪಾಲ್ಗೊಂಡಿದ್ದ ಅವರಿಗೆ ಮಾತ್ರೆಗಳು ಮತ್ತು ಇಂಜೆಕ್ಷನ್ ಅನ್ನು ನೀಡಲಾಗಿತ್ತು. ಅದಾದ ನಂತರ 2024ರ ಡಿಸೆಂಬರ್‌ನಲ್ಲಿ ವೀರಣ್ಣ ಅವರಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಯಿತು.

ಜನವರಿ 21 ರಂದು ರಾತ್ರಿ ಇಬ್ಬರು ಸಹೋದರರು ಊಟ ಮಾಡಿ ಎಂದಿನಂತೆ ಮಲಗಲು ಹೋದರು. ಆದರೆ, ಬುಧವಾರ ಬೆಳಗ್ಗೆ ನಾಗೇಶ್ ಅವರನ್ನು ಎಬ್ಬಿಸಲು ಸಿದ್ದಪ್ಪ ಪ್ರಯತ್ನಿಸಿದಾಗ ಅವರು ಸ್ಪಂದಿಸಿಲ್ಲ.

ಆದರೆ, ಬುಧವಾರ ಬೆಳಗ್ಗೆ ನಾಗೇಶ್ ವೀರಣ್ಣ ಅವರನ್ನು ಎಬ್ಬಿಸಲು ಸಿದ್ದಪ್ಪ ಯತ್ನಿಸಿದಾಗ ಅವರು ಸ್ಪಂದಿಸಲಿಲ್ಲ. ಅವರು ತಕ್ಷಣ ಆರ್ & ಡಿ ಸಂಸ್ಥೆಯ ವೈದ್ಯರನ್ನು ಸಂಪರ್ಕಿಸಿದ್ದಾರೆ. ಇದಕ್ಕೂ ಮೊದಲು ನಾಗೇಶ್ ಅವರನ್ನು ದಾಖಲಿಸಿದ್ದ ಅದೇ ಆಸ್ಪತ್ರೆಗೆ ಕರೆತರುವಂತೆ ಅವರು ಸೂಚಿಸಿದ್ದಾರೆ. ಸ್ಥಳಕ್ಕಾಗಮಿಸಿದ ವೈದ್ಯರು ನಾಗೇಶ್ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT