ಬಸವರಾಜ ರಾಯರೆಡ್ಡಿ  online desk
ರಾಜ್ಯ

ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ನಿರ್ಮಾಣವಾದರೂ ಒಬ್ಬನೇ ಒಬ್ಬ ಮುಸ್ಲಿಂ ವಿರೋಧಿಸಲಿಲ್ಲ: ಬಸವರಾಜ ರಾಯರೆಡ್ಡಿ

ಕೊಪ್ಪಳದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಬಸವರಾಜ ರಾಯರೆಡ್ಡಿ, ಮುಸ್ಲಿಮರು ನಮ್ಮ ದೇಶದವರೇ, ಅವರು ಮಂಗಳ ಗ್ರಹದಿಂದ ಬಂದವರಲ್ಲ.

ಕೊಪ್ಪಳ: ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ನಿರ್ಮಾಣ ಮಾಡಿದರು, ಆದರೆ ಒಬ್ಬನೇ ಒಬ್ಬ ಮುಸ್ಲಿಂ ಸಹ ಅದನ್ನು ವಿರೋಧಿಸಲಿಲ್ಲ ಹಿಂದೂಗಳಿಗೆ ಹೋಲಿಕೆ ಮಾಡಿದರೆ ಮುಸ್ಲಿಮರು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಕಾಂಗ್ರೆಸ್ ಶಾಸಕ, ವಿಶೇಷ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಬಸವರಾಜ ರಾಯರೆಡ್ಡಿ, ಮುಸ್ಲಿಮರು ನಮ್ಮ ದೇಶದವರೇ, ಅವರು ಮಂಗಳ ಗ್ರಹದಿಂದ ಬಂದವರಲ್ಲ. ಹಿಂದೂಗಳಿಗೆ ಹೋಲಿಕೆ ಮಾಡಿದರೆ ಮುಸ್ಲಿಮರು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಬಾಬ್ರಿ ಮಸೀದಿ ಒಡೆದು ರಾಮ ಮಂದಿರ ನಿರ್ಮಾಣ ಮಾಡಿದರೂ ಸಹ ಯಾವುದೇ ಒಬ್ಬ ಮುಸ್ಲಿಮರುದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಬಗ್ಗೆಯೂ ಮಾತನಾಡಿರುವ ರಾಯರೆಡ್ಡಿ, ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದಾರೆ. ಅವರು ಬಡವರ ಪರ ಕಾಳಜಿ ಹೊಂದಿದ್ದಾರೆ. ಅವರು 5 ವರ್ಷ ಸಿಎಂ ಆಗಿರಬೇಕು ಅವಧಿ ಪೂರ್ಣಗೊಳಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಬೇಡಿಕೆಯಿದೆ. ಈ ಬಜೆಟ್ ನಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಸುವ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದರು.

ಇನ್ನು ವಸತಿ ಸಚಿವ ಜಮೀರ್ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿರುವ ರಾಯರೆಡ್ಡಿ, ಜಮೀರ್ ಒಳ್ಳೆಯ ಹೃದಯವಂತ, ಬಡವರ ಪರ ಕಾಳಜಿಯುಳ್ಳ ನಾಯಕ ಎಂದು ಬಣ್ಣಿಸಿದ್ದಾರೆ. ಜಮೀರ್ ಹುಟ್ಟು ಶ್ರೀಮಂತನಾಗಿದ್ದಾನೆ. ಆತನಿಗೆ ರಾಜಕೀಯಕ್ಕೆ ಬಂದು ಹಣ ಗಳಿಸುವ ಅವಶ್ಯಕತೆಯಿಲ್ಲ. ಆದರೆ, ಬಡವರ ಬಗ್ಗೆ ಹೆಚ್ಚು ಕಾಳಜಿಯಿದೆ, ಆತನಿಗೆ ಒಳ್ಳೆಯದಾಗಲಿ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

US–Iran conflict| ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; 6ನೇ ದಿನಕ್ಕೆ ಕಾಲಿಟ್ಟ ಯುದ್ಧ –ಡೊನಾಲ್ಡ್ ಟ್ರಂಪ್ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಸೆನೆಟ್ ವಿಫಲ

SCROLL FOR NEXT