ಬಿವೈ ವಿಜಯೇಂದ್ರ 
ರಾಜ್ಯ

MUDA case: ಸಿದ್ದರಾಮಯ್ಯ ಪತ್ನಿ, ಬೈರತಿ ಸುರೇಶ್ ED ಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ

ಮಂಗಳವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪಾರ್ವತಿ ಹಾಗೂ ಬೈರತಿ ಸುರೇಶ್ ಅವರಿಗೆ ಇ.ಡಿ ನೋಟಿಸ್‌ ನೀಡಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಜಾರಿ ನಿರ್ದೇಶನಾಲಯದಿಂದ (ಇ.ಡಿ) ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಸೋಮವಾರ ಹೇಳಿದೆ.

ಮಂಗಳವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪಾರ್ವತಿ ಹಾಗೂ ಬೈರತಿ ಸುರೇಶ್ ಅವರಿಗೆ ಇ.ಡಿ ನೋಟಿಸ್‌ ನೀಡಿದೆ. ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತಿತರರು ಆರೋಪಿಗಳಾಗಿದ್ದಾರೆ.

ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮೈಸೂರಿನ ಹೃದಯ ಭಾಗದಲ್ಲಿನ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ ಪೊಲೀಸರಲ್ಲದೆ, ಜಾರಿ ನಿರ್ದೇಶನಾಲಯವೂ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ‘ಮುಖ್ಯಮಂತ್ರಿ ಪತ್ನಿ ಪಾರ್ವತಿ ಹಾಗೂ ಬೈರತಿ ಸುರೇಶ್‌ ಅವರು ತನಿಖಾ ಸಂಸ್ಥೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಇತರರಿಗೆ ಕ್ಲೀನ್ ಚಿಟ್ ನೀಡಿ ಲೋಕಾಯುಕ್ತ ಪೊಲೀಸರು ಹೈಕೋರ್ಟ್‌ಗೆ ಕ್ಲೋಸರ್ ರಿಪೋರ್ಟ್ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ’ ಎಂದರು.

ಪ್ರಕರಣ ರಾಜಕೀಯ ಪ್ರೇರಿತ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಆದರೆ, ಹಾಗೆ ಹೇಳುವಾಗ ಶಿವಕುಮಾರ್ ಮುಖದಲ್ಲಿ ಮಂದಹಾಸ ಎದ್ದು ಕಾಣುತ್ತಿತ್ತು. ವಿಷಯ ಏನೇ ಆಗಿರಬಹುದು ಆದರೆ, ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದು ಭಾರಿ ಹಿನ್ನಡೆಯಾಗಿದೆ ಎಂದು ಹೇಳಿದರು.

ಪಾರ್ವತಿ ಅವರು ನಿವೇಶನಗಳನ್ನು ಹಿಂದಿರುಗಿಸುವಂತೆ ಮುಡಾ ಆಯುಕ್ತರಿಗೆ ಪತ್ರ ಬರೆದ ನಂತರ ಮುಖ್ಯಮಂತ್ರಿ ಅವರು ಮುಡಾ ಹಗರಣದಿಂದ ಹೊರಬರುತ್ತೇನೆ ಎಂದು ಭಾವಿಸಿದ್ದಾರೆ. ಆದರೆ, ಇ.ಡಿ ನೋಟಿಸ್ ನೀಡಿರುವುದರಿಂದ ಅವರಿಗೆ ನೋವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT