ನಟೇಶ್ 
ರಾಜ್ಯ

ಮುಡಾ ಮಾಜಿ ಆಯುಕ್ತ ನಟೇಶ್ ಗೆ ಬಿಗ್ ರಿಲೀಫ್: ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್

ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿ, ದಾಖಲು ಮಾಡಿಕೊಂಡಿರುವ ತಮ್ಮ ಪ್ರಮಾಣಿತ ಹೇಳಿಕೆ ಪ್ರಶ್ನಿಸಿ ನಟೇಶ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್​ ಅವರಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಬಿಗ್ ರಿಲೀಫ್ ನೀಡಿದೆ.

ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿ, ದಾಖಲು ಮಾಡಿಕೊಂಡಿರುವ ತಮ್ಮ ಪ್ರಮಾಣಿತ ಹೇಳಿಕೆ ಪ್ರಶ್ನಿಸಿ ನಟೇಶ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ನಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ, ಜನವರಿ 16 ರಂದು ಆದೇಶ ಕಾಯ್ದಿರಿಸಿದ್ದರು. ಇಂದು ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ಒಳಗೊಂಡ ಮುಡಾ ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸಲು ಯತ್ನಿಸುತ್ತಿದೆ. ಆದರೆ ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಎರಡನೆಯದಾಗಿ ಜಾರಿ ನಿರ್ದೇಶನಾಲಯ ನಿರ್ದೇಶಕರು ಅಥವಾ ಅವರು ಸೂಚಿಸುವ ಅಧಿಕಾರಿಗಳು ಇದು ಶೋಧ ಮತ್ತು ಜಫ್ತಿ ನಡೆಸಲು ಸೂಕ್ತ ಪ್ರಕರಣ ಎಂದು ಹೇಳಬೇಕು. ಹಾಲಿ ಪ್ರಕರಣದಲ್ಲಿ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರಿಗೆ ತನಿಖೆಗೆ ಅನುಮತಿಸಿದ್ದಾರೆ. ಇದಕ್ಕೆ ಹಣ ಅಕ್ರಮ ವರ್ಗಾವಣೆ ಕಾಯಿದೆ ಸೆಕ್ಷನ್ 17(1)ರಲ್ಲಿ ಅವಕಾಶವಿಲ್ಲ. ಈ ನೆಲೆಯಲ್ಲಿ ಇಡೀ ಶೋಧ ಮತ್ತು ಜಫ್ತಿ ಕಾರ್ಯಾಚರಣೆ ಕಾನೂನುಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT