ನಟೇಶ್ 
ರಾಜ್ಯ

ಮುಡಾ ಮಾಜಿ ಆಯುಕ್ತ ನಟೇಶ್ ಗೆ ಬಿಗ್ ರಿಲೀಫ್: ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್

ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿ, ದಾಖಲು ಮಾಡಿಕೊಂಡಿರುವ ತಮ್ಮ ಪ್ರಮಾಣಿತ ಹೇಳಿಕೆ ಪ್ರಶ್ನಿಸಿ ನಟೇಶ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್​ ಅವರಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಬಿಗ್ ರಿಲೀಫ್ ನೀಡಿದೆ.

ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನ್ನ ಮನೆಯಲ್ಲಿ ನಡೆಸಿರುವ ಶೋಧ ಕಾರ್ಯ ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಿ, ದಾಖಲು ಮಾಡಿಕೊಂಡಿರುವ ತಮ್ಮ ಪ್ರಮಾಣಿತ ಹೇಳಿಕೆ ಪ್ರಶ್ನಿಸಿ ನಟೇಶ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ನಟೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠ, ಜನವರಿ 16 ರಂದು ಆದೇಶ ಕಾಯ್ದಿರಿಸಿದ್ದರು. ಇಂದು ಸಮನ್ಸ್ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ಒಳಗೊಂಡ ಮುಡಾ ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸಲು ಯತ್ನಿಸುತ್ತಿದೆ. ಆದರೆ ಇದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಎರಡನೆಯದಾಗಿ ಜಾರಿ ನಿರ್ದೇಶನಾಲಯ ನಿರ್ದೇಶಕರು ಅಥವಾ ಅವರು ಸೂಚಿಸುವ ಅಧಿಕಾರಿಗಳು ಇದು ಶೋಧ ಮತ್ತು ಜಫ್ತಿ ನಡೆಸಲು ಸೂಕ್ತ ಪ್ರಕರಣ ಎಂದು ಹೇಳಬೇಕು. ಹಾಲಿ ಪ್ರಕರಣದಲ್ಲಿ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರಿಗೆ ತನಿಖೆಗೆ ಅನುಮತಿಸಿದ್ದಾರೆ. ಇದಕ್ಕೆ ಹಣ ಅಕ್ರಮ ವರ್ಗಾವಣೆ ಕಾಯಿದೆ ಸೆಕ್ಷನ್ 17(1)ರಲ್ಲಿ ಅವಕಾಶವಿಲ್ಲ. ಈ ನೆಲೆಯಲ್ಲಿ ಇಡೀ ಶೋಧ ಮತ್ತು ಜಫ್ತಿ ಕಾರ್ಯಾಚರಣೆ ಕಾನೂನುಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT