ಪ್ರಕಾಶ್ ರಾಜ್ ಕುಂಭಮೇಳದಲ್ಲಿ ಎಐ ಚಿತ್ರ (ಎಡಭಾಗದ ಚಿತ್ರ)  online desk
ರಾಜ್ಯ

ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸುವುದೇ ಕೆಲಸ: Maha kumbh AI ಫೋಟೋ ಬಗ್ಗೆ Prakash Raj; ಕೇಸ್ ದಾಖಲು!

Mahakumbh 2025 ರಲ್ಲಿ ನಟ ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ ಎಂಬಂತೆ ಕಾಣುವ ಫೋಟೋವನ್ನು ಕೃತಕ ಬುದ್ಧಿಮತ್ತೆ ಟೂಲ್ (AI) ಬಳಸಿ ರಚಿಸಲಾಗಿತ್ತು.

ಸುಳ್ಳು ಮಾಹಿತಿ ನೀಡುವ ಫೋಟೊ ಹಂಚಿಕೊಂಡಿದ್ದಕ್ಕಾಗಿ ಪ್ರಶಾಂತ್ ಸಂಬರ್ಗಿ (Prashanth Sambargi) ವಿರುದ್ಧ ನಟ ಪ್ರಕಾಶ್ ರಾಜ್ ಪ್ರಕರಣ ದಾಖಲಿಸುವುದಾಗಿ ಟ್ವೀಟ್ ಮಾಡಿದ್ದಾರೆ.

Mahakumbh 2025 ರಲ್ಲಿ ನಟ ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ ಎಂಬಂತೆ ಕಾಣುವ ಫೋಟೋವನ್ನು ಕೃತಕ ಬುದ್ಧಿಮತ್ತೆ ಟೂಲ್ (AI) ಬಳಸಿ ರಚಿಸಲಾಗಿತ್ತು. ಈ AI ಫೋಟೋ ಎಲ್ಲೆಡೆ ವೈರಲ್ ಆಗತೊಡಗಿದೆ.

ಪ್ರಕಾಶ್ ರಾಜ್ ಗೆ ಸಂಬಂಧಿಸಿದ AI ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಪ್ರಶಾಂತ್ ಸಂಬರ್ಗಿ, ಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು, ಅವರ ಪಾಪಗಳನ್ನು ಮನ್ನಿಸಲಾಗುತ್ತದೆ. ಪಾಪ ಕಳೆಯುತ್ತದೆ ಎಂಬ ಆಶಾಭಾವನೆ ಇದೆ ಎಂದು ಶೀರ್ಷಿಕೆ ನೀಡಿದ್ದರು.

ಪ್ರಶಾಂತ್ ಸಂಬರ್ಗಿ ಪೋಸ್ಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರಕಾಶ್ ರಾಜ್ "ಸುಳ್ಳು ಸುದ್ದಿ “ಸುಳ್ಳ ರಾಜ” ನ ಹೇಡಿಗಳ ಸೈನ್ಯಕ್ಕೆ.. ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ.. police complaint ದಾಖಲಾಗಿದೆ.. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT