ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಗಣಿ ಉದ್ಯಮಿಗಳಾದ ದೊಡ್ಡಣ್ಣವರ್ ಬ್ರದರ್ಸ್ ಮನೆ, ಕಚೇರಿ ಮೇಲೆ ಐಟಿ ದಾಳಿ

ದೊಡ್ಡಣ್ಣವರ್ ಬ್ರದರ್ಸ್​ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಬೆಳಗಾವಿ : ಬೆಳಗಾವಿಯ ಖ್ಯಾತ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ದೊಡ್ಡಣ್ಣವರ್ ಬ್ರದರ್ಸ್​ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿಗೆ ದೊಡ್ಡಣ್ಣವರ್ ಕುಟುಂಬಸ್ಥರನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಮನೆ, ಕಚೇರಿ ಮೇಲೆ, ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಉದ್ಯಮಿ ಅಜಿತ್ ಪಟೇಲ, ಗಣೇಶ ಪುರದಲ್ಲಿರುವ ಅಶೋಕ ಐರಾನ್ ಕಂಪನಿ ಮಾಲೀಕ ಅಶೋಕ ಹುಂಬರವಾಡಿ ಮನೆ ಮೇಲೂ ದಾಳಿ ನಡೆದಿದೆ.

ದೊಡ್ಡಣ್ಣವರ ಕುಟುಂಬದವರು ಎರಡು ಸಕ್ಕರೆ ಕಾರ್ಖಾನೆ, ಐರನ್ ಹಾಗೂ ಗ್ರೈನೆಟ್ ಉದ್ಯಮದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ‌. ಅವರ ಉತ್ಪನ್ನಗಳು ವಿದೇಶಗಳಿಗೂ ರಪ್ತಾಗುತ್ತವೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳ ತಂಡ ದಾಖಲೆಗಳು, ಆಸ್ತಿಪಾಸ್ತಿ ಪರಿಶೀಲನೆ‌ ಶುರು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

ಚಿಕ್ಕಬಳ್ಳಾಪುರ: 'Miss U Chinna' ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

Maria Corina Machado: ನೋಬೆಲ್ ಶಾಂತಿ ಪ್ರಶಸ್ತಿ ಗೆದ್ದ ಮರಿಯಾ ಕೊರಿನಾ ಮಚಾದೊ ಕುರಿತು ಆಸಕ್ತಿಕರ ಮಾಹಿತಿ ಇಲ್ಲಿದೆ!

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ'.. 'ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

SCROLL FOR NEXT