ಬೆಂಗಳೂರು ಕರಗ ಸಂಗ್ರಹ ಚಿತ್ರ
ರಾಜ್ಯ

ಏಪ್ರಿಲ್ 4 ರಿಂದ 14 ರವರೆಗೆ ಐತಿಹಾಸಿಕ ಬೆಂಗಳೂರು ಕರಗ

ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.

ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ (Bengaluru Karaga) ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏ.4ರಿಂದ 14ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ ಎಂದು ತಿಳಿದುಬಂದಿದೆ.

ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 15ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ನಿನ್ನೆ ಅಂದರೆ ಫೆ.27ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ.

ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT