ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ 
ರಾಜ್ಯ

ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲ, ಸಿಎಂ ಪತ್ನಿ ಪಾರ್ವತಿ ಕೂಡ ಭಾಗಿಯಾಗಿಲ್ಲ: ಸಚಿವ ಬೈರತಿ ಸುರೇಶ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಬಗ್ಗೆ ನಾನು ತುಂಬಾ ಸ್ಪಷ್ಟವಾಗಿದ್ದೇನೆ. ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ಮುಡಾ ಹಗರಣದಲ್ಲಿ ತಾನು ಭಾಗಿಯಾಗಿಲ್ಲ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಪಾತ್ರವೂ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಂಗಳವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಈ ಬಗ್ಗೆ ನಾನು ತುಂಬಾ ಸ್ಪಷ್ಟವಾಗಿದ್ದೇನೆ. ಪ್ರಕರಣದಲ್ಲಿ ನಮ್ಮ ಪಾತ್ರವಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಪ್ರಕರಣವನ್ನು ಫೆಬ್ರುವರಿ 10 ಕ್ಕೆ ಮುಂದೂಡಲಾಗಿದ್ದು, ನಂತರ ಏನಾಗುತ್ತದೆ ಎಂಬುದನ್ನು ಕಾದು ನೋಡೋಣ' ಎಂದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ವಿಚಾರಣೆಗಾಗಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಬೈರತಿ ಸುರೇಶ್ ಮತ್ತು ಸಿಎಂ ಪತ್ನಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ಸೋಮವಾರ ತಡೆ ನೀಡಿದೆ.

'ನನಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇವೆ. ಇ.ಡಿ ಅಧಿಕಾರಿಗಳು ನಮಗೆ ಏಕೆ ನೋಟಿಸ್ ನೀಡಿದ್ದಾರೆ ಎಂಬುದನ್ನು ವಿವರಿಸಬೇಕು' ಎಂದು ಹೇಳಿದರು.

'ನೋಟಿಸ್ ಬಂದಾಗ ನನಗೆ ಆಶ್ಚರ್ಯವಾಯಿತು. ಹಗರಣ ನಡೆದಾಗ ನಾನು ನಗರಾಭಿವೃದ್ಧಿ ಇಲಾಖೆಯ ಉಸ್ತುವಾರಿ ವಹಿಸಿರಲಿಲ್ಲ. ನಾನು ಯಾವುದೇ ಸೈಟ್‌ಗಳನ್ನು ಮಂಜೂರು ಮಾಡಿಲ್ಲ ಅಥವಾ ಸ್ವಾಧೀನಪಡಿಸಿಕೊಂಡಿಲ್ಲ. ಪ್ರಶ್ನೆಗಳು ಎದ್ದ ನಂತರ, ಸಿಎಂ ಪತ್ನಿಗೆ ಮಂಜೂರು ಮಾಡಿದ್ದ ನಿವೇಶನಗಳನ್ನು ಹಿಂತಿರುಗಿಸಲಾಯಿತು. ಹೈಕೋರ್ಟ್ ನ್ಯಾಯಾಧೀಶರು ಈ ಸಂಗತಿಗಳನ್ನು ಮನಗಂಡರು ಮತ್ತು ತಡೆಯಾಜ್ಞೆ ನೀಡಿದರು. ಇ.ಡಿಯಿಂದ ನನಗೆ ಬಂದ ಮೊದಲ ನೋಟಿಸ್ ಇದಾಗಿದೆ' ಎಂದು ಬೈರತಿ ಸುರೇಶ್ ತಿಳಿಸಿದರು.

ಸಚಿವ ಬೈರತಿ ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ನಾಶಪಡಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT