ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  
ರಾಜ್ಯ

ಅನಧಿಕೃತ ಜಾಹೀರಾತು ಹಾಕಿರುವವರ ವಿರುದ್ಧ FIR ದಾಖಲಿಸಿ: ಅಧಿಕಾರಿಗಳಿಗೆ BBMP ಖಡಕ್ ಸೂಚನೆ

ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಮೀಕ್ಷೆಯ ಮೂಲಕ 27,655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ಅವರಿಗೆ ನಿಗದಿಪಡಿಸಿರುವ ಸ್ಥಳದಲ್ಲೇ ಮಾರಾಟ ಮಾಡಲು ಕ್ರಮವಹಿಸಬೇಕು.

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ಎಲ್ಲ 8 ವಲಯಗಳಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ಗುರುತಿಸಿ ಕೂಡಲೆ ಅದನ್ನು ತೆರವುಗೊಳಿಸಬೇಕು. ಜೊತೆಗೆ ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು ಎಂದು ಹೇಳಿದರು.

27,000 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ

ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ ಸಮೀಕ್ಷೆಯ ಮೂಲಕ 27,655 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿ ಅವರಿಗೆ ನಿಗದಿಪಡಿಸಿರುವ ಸ್ಥಳದಲ್ಲೇ ಮಾರಾಟ ಮಾಡಲು ಕ್ರಮವಹಿಸಬೇಕೆಂದು ಸೂಚನೆ ನೀಡಿದರು.

ಒಂಟಿ ಮನೆ ಯೋಜನೆ ಅನುಷ್ಠಾನ

ನಗರದಲ್ಲಿ ಒಂಟಿ ಮನೆ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿರುವ ಪೈಕಿ, ಅರ್ಹ ಫಲಾನುಭವಿಗಳನ್ನು ಕೂಡಲೇ ಗುರುತಿಸಬೇಕು. ಅನಂತರ ಹಂತ-ಹಂತವಾಗಿ ಅನುದಾನ ಬಿಡುಗಡೆಗೊಳಿಸಲು ಅಗತ್ಯ ಕ್ರಮವಹಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರಿತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ಸ್ನೇಹಲ್, ವಿನತ್ ಪ್ರಿಯಾ, ರಮ್ಯಾ, ರಮೇಶ್, ಕರೀಗೌಡ, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT