ಡಿಕೆ ಶಿವಕುಮಾರ್ online desk
ರಾಜ್ಯ

ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀರು ನೀಡಲು ಸಾಧ್ಯ?: ಕಾವೇರಿ ನೀರಿನ ದರ ಏರಿಕೆ ಬಗ್ಗೆ DK Shivakumar ಸುಳಿವು

ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ, ಬಿಎಂಆರ್‌ಡಿಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರಿಗೆ ಪೂರೈಕೆಯಾಗುತ್ತಿರುವ ಕಾವೇರಿ ನೀರಿನ ದರ ಏರಿಕೆಯ ಬಗ್ಗೆ ಜಲಸಂಪನ್ಮೂಲ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ.

ನಗರದ ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ಎಸ್‌ಬಿ, ಬಿಎಂಆರ್‌ಡಿಎ ಅಧಿಕಾರಿಗಳ ಜತೆ ಮಂಗಳವಾರ ಸಭೆ ನಡೆಸಿ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್

ಏನೂ ಇಲ್ಲದೇ ಇನ್ನೆಷ್ಟು ದಿನ ಕಡಿಮೆ ಬೆಲೆಗೆ ನೀರು ನೀಡಲು ಆಗುತ್ತದೆ. ಮಂಡಳಿಯಲ್ಲಿ ನೌಕರರು ಸಂಬಳ ನೀಡಿಲ್ಲ ಎಂದು ಜಗಳ ಮಾಡುತ್ತಿದ್ದಾರೆ' ಜಲ ಮಂಡಳಿಗೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತಿದೆ. ಚರ್ಚೆಯ ನಂತರ ಬೆಲೆ ಏರಿಕೆ ಬಗ್ಗೆ ತಿಳಿಸಲಾಗುವುದು. ಇದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಬಡವರು ಹೆಚ್ಚು ಹಣ ನೀಡಲು ಆಗದಿದ್ದರೆ ಒಂದು ಲೀಟರ್‌ಗೆ ಒಂದು ಪೈಸೆಯಾದರೂ ನೀಡಲಿ ಎಂಬುದು ನಮ್ಮ ಅಭಿಲಾಷೆ. ಇದರಿಂದ ನೀರಿನ ಬಳಕೆಯ ಲೆಕ್ಕ ದೊರೆಯಲಿ ಎನ್ನುವುದು ಇದರ ಉದ್ದೇಶ ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

2014 ರಿಂದ ಈ ವರೆಗೂ ನಗರದಲ್ಲಿ ಕಾವೇರಿ ನೀರಿನ ದರ ಹೆಚ್ಚಳ ಮಾಡಿಲ್ಲ. ಈ ಕಾರಣಕ್ಕೆ ಬೆಂಗಳೂರು ಜಲಮಂಡಳಿಗೆ ವರ್ಷಕ್ಕೆ 1 ಸಾವಿರ ಕೋಟಿ ರೂ. ನಷ್ಟ ಆಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿ ರೂ. ಆಗುತ್ತಿತ್ತು. ಈ ಬಾರಿ 75 ಕೋಟಿ ರೂ. ಆಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ತಿಂಗಳಿಗೆ 85 ಕೋಟಿ ಹಣ ನಷ್ಟವಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ನೀರಿನ ಜಾಲ ವಿಸ್ತರಣೆ ಮಾಡುವ ಸಲುವಾಗಿ ಅನೇಕ ಬ್ಯಾಂಕ್‌ಗಳ ಬಳಿ ಸಾಲ ಕೇಳಲೂ ಆಗುತ್ತಿಲ್ಲ. ಬ್ಯಾಂಕ್ ಅವರು ಮಂಡಳಿ ನಷ್ಟದಲ್ಲಿದೆ ನಾವು ಸಹಾಯ ಮಾಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ನಮಗೆ ಹಣ ನೀಡುತ್ತಿರುವ ಜೈಕಾ ಸಂಸ್ಥೆ ಸೇರಿ ಹಲವಾರು ಸಂಸ್ಥೆಗಳು ನೆರವು ಬೇಕು ಎಂದಾದರೆ ಹಣ ವಾಪಸಾತಿಯ ಬಗ್ಗೆ ಭರವಸೆ ನೀಡಿ ಎಂದು ತಿಳಿಸುತ್ತಿದ್ದಾರೆ ಡಿಕೆ ಶಿವಕುಮಾರ್ ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್